ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ನಿಧನ

Last Updated 14 ಡಿಸೆಂಬರ್ 2022, 5:30 IST
ಅಕ್ಷರ ಗಾತ್ರ

ಯಲ್ಲಾಪುರ: ಯಕ್ಷಗಾನ ಭಾಗವತಿಕೆ ಹಾಗೂ ಸಂಗೀತದಲ್ಲಿ‌ ಅಪಾರ ಜ್ಞಾನ ಹೊಂದಿದ್ದ, ತಾಲ್ಲೂಕಿನ ತಿಮ್ಮಪ್ಪ ಭಾಗವತ ಬಾಳೆಹದ್ದ (59), ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಂಗಳವಾರ ಸಂಜೆ ನಿಧನರಾದರು. ತಾಲ್ಲೂಕಿನ ಹಿತ್ಲಳ್ಳಿ ಬಳಿ ಅವರಿದ್ದ ಕಾರಿಗೆ, ಎದುರಿನಿಂದ ಬಂದಕಾರು ಡಿಕ್ಕಿಯಾಗಿ ಗಂಭೀರ ಸ್ವರೂಪದಿಂದ ಗಾಯಗೊಂಡಿದ್ದರು.

ತಂದೆ, ಪ್ರಸಿದ್ಧ ಭಾಗವತರಾಗಿದ್ದ ಕೃಷ್ಣ ಭಾಗವತ ಅವರ ಬಳಿ ಭಾಗವತಿಕೆ ಕಲಿತ ಇವರು, ಬಾವ ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಜ್ಞಾನ ಪಡೆದಿದ್ದರು. ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದ ಇವರು ಸೋಂದಾದ ಯಕ್ಷಗಾನ ಬಳಗದಲ್ಲಿ ಗುರುತಿಸಿಕೊಂಡಿದ್ದರು.

ರಂಗಭೂಮಿಗೆ ಸಂಗೀತ ನೀಡುತ್ತಿದ್ದ ಇವರು ರಂಗಾಯಣದ ಮೂಲಕ ಖೈದಿಗಳಿಗೆ ನಾಟಕ ಕಲಿಸುವ ತಂಡದಲ್ಲಿ ಸಕ್ರಿಯರಾಗಿದ್ದರು. ಇವರಿಗೆ ಒಬ್ಬ ಪುತ್ರ, ಒಬ್ಬಪುತ್ರಿಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT