ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗದಿದ್ದರೆ, ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಿವರಾಮ ಹೆಬ್ಬಾರ್ ಅವರು ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ತಂತ್ರ ರೂಪಿಸಿದ್ದಾರೆ. ಆದರೆ, ಅವರನ್ನು ಹೊರತುಪಡಿಸಿ, ಬೇರೆಯವರು ಸ್ಪರ್ಧಿಸಿದರೆ, ಸೆಡ್ಡು ಹೊಡೆಯಲು ಬಿಜೆಪಿ ಪಡೆ ಮುಂದಾಗಿದೆ.