<p>ಯಲ್ಲಾಪುರ: `ಅಕ್ಕ ಕೆಫೆ’ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ. ಹಳ್ಳಿಯಿಂದ ಬರುವ ಬಡವರಿಗಾಗಿ ಇಲ್ಲಿ ಉತ್ತಮ ಗುಣಮಟ್ಟದ ಊಟೋಪಚಾರ ವ್ಯವಸ್ಥೆ ಸಿಗಲಿದೆ. ಸ್ವಸಹಾಯ ಸಂಘದ ಸದಸ್ಯರಿಗೆ ಉದ್ಯೋಗ ಸೃಷ್ಟಿ ಆಗಲಿದೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದ ಇಂದಿರಾ ಕ್ಯಾಂಟೀನ್ ಸಮೀಪ ಮಂಗಳವಾರ ‘ಅಕ್ಕ ಕೆಫೆ’ (ಪ್ರೀಮಿಯಂ ಮಾದರಿಯಲ್ಲಿ) ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸ್ವಸಹಾಯ ಸಂಘಗಳು ಸ್ವಾವಲಂಬಿ ಆಗುವಲ್ಲಿ ಈ ಯೋಜನೆ ಸಹಾಯಕ. ಒಂದೂವರೆ ತಿಂಗಳಿನಲ್ಲಿ ಈ ಕಟ್ಟಡ ಪೂರ್ತಿಗೊಳಿಸಿ ಅಕ್ಕ ಕೆಫೆ ಉದ್ಘಾಟನೆಯಾಗಬೇಕು’ ಎಂದು ಗುತ್ತಿಗೆದಾರರಿಗೆ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ, ಪ್ರಮುಖರಾದ ವಿಜಯ ಮಿರಾಶಿ, ವಿ.ಎಸ್.ಭಟ್ಟ, ಜಗದೀಶ ನಾಯಕ, ಗುರುಪ್ರಸಾದ ಅಂಕೋಲೆಕರ, ಮಂಜಣ್ಣ ಬಿ, ರಾಜಾರಾಮ ವೈದ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-20-801617573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ: `ಅಕ್ಕ ಕೆಫೆ’ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ. ಹಳ್ಳಿಯಿಂದ ಬರುವ ಬಡವರಿಗಾಗಿ ಇಲ್ಲಿ ಉತ್ತಮ ಗುಣಮಟ್ಟದ ಊಟೋಪಚಾರ ವ್ಯವಸ್ಥೆ ಸಿಗಲಿದೆ. ಸ್ವಸಹಾಯ ಸಂಘದ ಸದಸ್ಯರಿಗೆ ಉದ್ಯೋಗ ಸೃಷ್ಟಿ ಆಗಲಿದೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದ ಇಂದಿರಾ ಕ್ಯಾಂಟೀನ್ ಸಮೀಪ ಮಂಗಳವಾರ ‘ಅಕ್ಕ ಕೆಫೆ’ (ಪ್ರೀಮಿಯಂ ಮಾದರಿಯಲ್ಲಿ) ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸ್ವಸಹಾಯ ಸಂಘಗಳು ಸ್ವಾವಲಂಬಿ ಆಗುವಲ್ಲಿ ಈ ಯೋಜನೆ ಸಹಾಯಕ. ಒಂದೂವರೆ ತಿಂಗಳಿನಲ್ಲಿ ಈ ಕಟ್ಟಡ ಪೂರ್ತಿಗೊಳಿಸಿ ಅಕ್ಕ ಕೆಫೆ ಉದ್ಘಾಟನೆಯಾಗಬೇಕು’ ಎಂದು ಗುತ್ತಿಗೆದಾರರಿಗೆ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ, ಪ್ರಮುಖರಾದ ವಿಜಯ ಮಿರಾಶಿ, ವಿ.ಎಸ್.ಭಟ್ಟ, ಜಗದೀಶ ನಾಯಕ, ಗುರುಪ್ರಸಾದ ಅಂಕೋಲೆಕರ, ಮಂಜಣ್ಣ ಬಿ, ರಾಜಾರಾಮ ವೈದ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-20-801617573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>