<p><strong>ಯಲ್ಲಾಪುರ</strong>: ತಾಲ್ಲೂಕಿನ ಅರಬೈಲು ಘಟ್ಟದಲ್ಲಿ ಸಂಚರಿಸುತ್ತಿದ್ದ ಸಿಗರೇಟಿನ ಲಾರಿ ಕದ್ದು ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಯಲ್ಲಾಪುರ ಪೊಲೀಸರು ಭಾನುವಾರ ಮತ್ತೊಬ್ಬ ಆರೋಪಿಯನ್ನು ಗುಜರಾತಿನಲ್ಲಿ ಬಂಧಿಸಿದ್ದಾರೆ.</p><p>ಮಹಮ್ಮದ್ ರಫಿಕ್ ಬಂಧಿತ ಆರೋಪಿ.</p><p>2013ರಲ್ಲಿ ಅರಬೈಲ್ದಲ್ಲಿ ಲಾರಿ ಕಳ್ಳತನ ನಡೆದಿತ್ತು. ಸಿಗರೇಟು ಸಾಗಿಸುತ್ತಿದ್ದ ಲಾರಿಯನ್ನು ನಾಲ್ವರು ಸೇರಿ ಅಪಹರಿಸಿದ್ದರು. ಸಿಗರೇಟನ್ನು ಮಾರಾಟ ಮಾಡಿ ಆ ಲಾರಿಯನ್ನು ಸುಟ್ಟು ಸಾಕ್ಷಿ ನಾಶ ಮಾಡಿದ್ದರು. ಕೆಲ ದಿನಗಳ ಹಿಂದೆ ಪೊಲೀಸರು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರಾಜೇಂದ್ರ ಸಿಂಗ್ ಎಂಬಾತನನ್ನು ಬಂಧಿಸಿದ್ದರು. ಇದೀಗ ಅದೇ ಪ್ರಕರಣದ ಮತ್ತೊಬ್ಬ ಆರೋಪಿ ಮಹಮದ್ ರಫಿಕ್ ಎಂಬಾತನನ್ನು ಬಂಧಿಸಿದ್ದಾರೆ.</p><p>ಗುಜರಾತಿನ ದಾಹೋಡಿನಲ್ಲಿರುವ ಸರಕಾರಿ ವಸಹಾತುವಿನಲ್ಲಿ ಮಹಮದ್ ರಫಿಕ್ ಅವಿತಿದ್ದರು. ಮಾಹಿತಿ ತಿಳಿದ ಪಿಎಸ್ಐ ಸಿದ್ದು ಗುಡಿ, ಪೊಲೀಸ್ ಸಿಬ್ಬಂದಿ ಶಫಿ ಶೇಖ್, ಗಿರೀಶ ಲಮಾಣಿ ಹಾಗೂ ಪರಶುರಾಮ ದೊಡ್ಡಮನಿ ಸೇರಿ ಮಹಮದ್ ರಫಿಕ್ರನ್ನು ಬಂಧಿಸಿದ್ದಾರೆ.</p><p>12 ವರ್ಷಗಳ ಹಿಂದೆಯೇ ಪೊಲೀಸರು ಮಹಮದ್ ರಫಿಕ್ನನ್ನು ಹಿಡಿದಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದು ಆತ ಪರಾರಿಯಾಗಿದ್ದ. ನಂತರ ಕೋರ್ಟಗೆ ಬಂದಿರಲಿಲ್ಲ. ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ತಾಲ್ಲೂಕಿನ ಅರಬೈಲು ಘಟ್ಟದಲ್ಲಿ ಸಂಚರಿಸುತ್ತಿದ್ದ ಸಿಗರೇಟಿನ ಲಾರಿ ಕದ್ದು ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಯಲ್ಲಾಪುರ ಪೊಲೀಸರು ಭಾನುವಾರ ಮತ್ತೊಬ್ಬ ಆರೋಪಿಯನ್ನು ಗುಜರಾತಿನಲ್ಲಿ ಬಂಧಿಸಿದ್ದಾರೆ.</p><p>ಮಹಮ್ಮದ್ ರಫಿಕ್ ಬಂಧಿತ ಆರೋಪಿ.</p><p>2013ರಲ್ಲಿ ಅರಬೈಲ್ದಲ್ಲಿ ಲಾರಿ ಕಳ್ಳತನ ನಡೆದಿತ್ತು. ಸಿಗರೇಟು ಸಾಗಿಸುತ್ತಿದ್ದ ಲಾರಿಯನ್ನು ನಾಲ್ವರು ಸೇರಿ ಅಪಹರಿಸಿದ್ದರು. ಸಿಗರೇಟನ್ನು ಮಾರಾಟ ಮಾಡಿ ಆ ಲಾರಿಯನ್ನು ಸುಟ್ಟು ಸಾಕ್ಷಿ ನಾಶ ಮಾಡಿದ್ದರು. ಕೆಲ ದಿನಗಳ ಹಿಂದೆ ಪೊಲೀಸರು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರಾಜೇಂದ್ರ ಸಿಂಗ್ ಎಂಬಾತನನ್ನು ಬಂಧಿಸಿದ್ದರು. ಇದೀಗ ಅದೇ ಪ್ರಕರಣದ ಮತ್ತೊಬ್ಬ ಆರೋಪಿ ಮಹಮದ್ ರಫಿಕ್ ಎಂಬಾತನನ್ನು ಬಂಧಿಸಿದ್ದಾರೆ.</p><p>ಗುಜರಾತಿನ ದಾಹೋಡಿನಲ್ಲಿರುವ ಸರಕಾರಿ ವಸಹಾತುವಿನಲ್ಲಿ ಮಹಮದ್ ರಫಿಕ್ ಅವಿತಿದ್ದರು. ಮಾಹಿತಿ ತಿಳಿದ ಪಿಎಸ್ಐ ಸಿದ್ದು ಗುಡಿ, ಪೊಲೀಸ್ ಸಿಬ್ಬಂದಿ ಶಫಿ ಶೇಖ್, ಗಿರೀಶ ಲಮಾಣಿ ಹಾಗೂ ಪರಶುರಾಮ ದೊಡ್ಡಮನಿ ಸೇರಿ ಮಹಮದ್ ರಫಿಕ್ರನ್ನು ಬಂಧಿಸಿದ್ದಾರೆ.</p><p>12 ವರ್ಷಗಳ ಹಿಂದೆಯೇ ಪೊಲೀಸರು ಮಹಮದ್ ರಫಿಕ್ನನ್ನು ಹಿಡಿದಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದು ಆತ ಪರಾರಿಯಾಗಿದ್ದ. ನಂತರ ಕೋರ್ಟಗೆ ಬಂದಿರಲಿಲ್ಲ. ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>