<p>ಯಲ್ಲಾಪುರ: ಸಹಕಾರ ಸಂಘಗಳು ಗ್ರಾಮೀಣ ಜನರ ಬದುಕನ್ನು ಎತ್ತರಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ತಾಲ್ಲೂಕಿನ ಮಂಚಿಕೇರಿಯಲ್ಲಿ ಈಚೆಗೆ ಹಾಸಣಗಿ ಸೊಸೈಟಿಯ ನೂತನ ಗೋದಾಮು ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೃಷಿ ಅವಲಂಬಿತರನ್ನು ಮೇಲಕ್ಕೆತ್ತುವ ಕೆಲಸ ಸಹಕಾರಿಗಳಿಂದ ಆಗಬೇಕು. ಹಳ್ಳಿಗಳು ಬರಿದಾಗಿ ಶಹರ ಬೆಳೆಯುತ್ತಿದೆ. ನಮ್ಮ ಅಗತ್ಯಗಳನ್ನು ನಿಯಂತ್ರಿಸಿಕೊಳ್ಳದೇ ಹೋದರೆ ಈ ರೀತಿ ನಗರೀಕರಣ, ವಲಸೆ ಜೀವನ ಬೆಳೆಯುತ್ತದೆ. ಇದರ ನಿಯಂತ್ರಣಕ್ಕಾಗಿ ನಾವು ಆಸೆಯನ್ನು ಇತಿಮಿತಿಯಲ್ಲಿ ಇಟ್ಟುಕೊಳ್ಳಬೇಕು. ಗ್ರಾಮೀಣ ಬದುಕಿನ ಕಷ್ಟಗಳನ್ನು ಜಯಿಸುವ ಸಾಮರ್ಥ್ಯ ತಂದುಕೊಳ್ಳಬೇಕು ಎಂದರು.</p>.<p>ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ರೈತರು ಮತ್ತು ಸಹಕಾರ ಕ್ಷೇತ್ರ ಜೊತೆ ಜೊತೆಯಾಗಿ ಸಾಗಬೇಕು. ಈ ಭಾಗದಲ್ಲಿ ಸಹಕಾರ ಕ್ಷೇತ್ರ ರೈತರ ಬೆನ್ನೆಲುಬಾಗಿದೆ. ರೈತರಿಂದ ಬೆಳೆದ ಸಹಕಾರಿಗಳು ಹಾನಿ ಲಾಭ ಲೆಕ್ಕಾಚಾರ ಮಾಡಬಾರದು. ಅಡಿಕೆ ಬೆಳೆಗಾರರು ಪರ್ಯಾಯ ಬೆಳೆ, ಎಲೆಚುಕ್ಕೆ ಬಗ್ಗೆ ಗಮನ ಹರಿಸಬೇಕು ಎಂದರು.</p>.<p>ಸೊಸೈಟಿ ಅಧ್ಯಕ್ಷ ಆರ್.ಎನ್. ಹೆಗಡೆ ಗೋರ್ಸಗದ್ದೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸಹಕಾರಿಗಳಾದ ಜಿ.ವಿ. ಹೆಗಡೆ ಹಿತ್ಲಳ್ಳಿ, ಎಂ.ಜಿ. ಭಟ್ಟ ಸಂಕದಗುಂಡಿ, ಹೇರಂಭ ಹೆಗಡೆ ಕುಂದರಗಿ, ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ನೇತ್ರೇಕರ್, ಸಹಾಯಕ ನಿಬಂಧಕ ಅಜಿತ್ ಶಿರಹಟ್ಟಿ ಇದ್ದರು.</p>.<p>ಟಿ.ವಿ. ಹೆಗಡೆ ಬೆದೆಹಕ್ಲು ಸ್ವಾಗತಿಸಿದರು. ರಶ್ಮಿ ಹೆಗಡೆ ನಿರ್ವಹಿಸಿದರು. ಜಿ.ಎನ್. ಭಟ್ಟ ಸಂದೇಶ ವಾಚಿಸಿದರು. ಗೋಪಾಲಕೃಷ್ಣ ನಂದಿಸರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-20-329676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ: ಸಹಕಾರ ಸಂಘಗಳು ಗ್ರಾಮೀಣ ಜನರ ಬದುಕನ್ನು ಎತ್ತರಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ತಾಲ್ಲೂಕಿನ ಮಂಚಿಕೇರಿಯಲ್ಲಿ ಈಚೆಗೆ ಹಾಸಣಗಿ ಸೊಸೈಟಿಯ ನೂತನ ಗೋದಾಮು ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೃಷಿ ಅವಲಂಬಿತರನ್ನು ಮೇಲಕ್ಕೆತ್ತುವ ಕೆಲಸ ಸಹಕಾರಿಗಳಿಂದ ಆಗಬೇಕು. ಹಳ್ಳಿಗಳು ಬರಿದಾಗಿ ಶಹರ ಬೆಳೆಯುತ್ತಿದೆ. ನಮ್ಮ ಅಗತ್ಯಗಳನ್ನು ನಿಯಂತ್ರಿಸಿಕೊಳ್ಳದೇ ಹೋದರೆ ಈ ರೀತಿ ನಗರೀಕರಣ, ವಲಸೆ ಜೀವನ ಬೆಳೆಯುತ್ತದೆ. ಇದರ ನಿಯಂತ್ರಣಕ್ಕಾಗಿ ನಾವು ಆಸೆಯನ್ನು ಇತಿಮಿತಿಯಲ್ಲಿ ಇಟ್ಟುಕೊಳ್ಳಬೇಕು. ಗ್ರಾಮೀಣ ಬದುಕಿನ ಕಷ್ಟಗಳನ್ನು ಜಯಿಸುವ ಸಾಮರ್ಥ್ಯ ತಂದುಕೊಳ್ಳಬೇಕು ಎಂದರು.</p>.<p>ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ರೈತರು ಮತ್ತು ಸಹಕಾರ ಕ್ಷೇತ್ರ ಜೊತೆ ಜೊತೆಯಾಗಿ ಸಾಗಬೇಕು. ಈ ಭಾಗದಲ್ಲಿ ಸಹಕಾರ ಕ್ಷೇತ್ರ ರೈತರ ಬೆನ್ನೆಲುಬಾಗಿದೆ. ರೈತರಿಂದ ಬೆಳೆದ ಸಹಕಾರಿಗಳು ಹಾನಿ ಲಾಭ ಲೆಕ್ಕಾಚಾರ ಮಾಡಬಾರದು. ಅಡಿಕೆ ಬೆಳೆಗಾರರು ಪರ್ಯಾಯ ಬೆಳೆ, ಎಲೆಚುಕ್ಕೆ ಬಗ್ಗೆ ಗಮನ ಹರಿಸಬೇಕು ಎಂದರು.</p>.<p>ಸೊಸೈಟಿ ಅಧ್ಯಕ್ಷ ಆರ್.ಎನ್. ಹೆಗಡೆ ಗೋರ್ಸಗದ್ದೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸಹಕಾರಿಗಳಾದ ಜಿ.ವಿ. ಹೆಗಡೆ ಹಿತ್ಲಳ್ಳಿ, ಎಂ.ಜಿ. ಭಟ್ಟ ಸಂಕದಗುಂಡಿ, ಹೇರಂಭ ಹೆಗಡೆ ಕುಂದರಗಿ, ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ನೇತ್ರೇಕರ್, ಸಹಾಯಕ ನಿಬಂಧಕ ಅಜಿತ್ ಶಿರಹಟ್ಟಿ ಇದ್ದರು.</p>.<p>ಟಿ.ವಿ. ಹೆಗಡೆ ಬೆದೆಹಕ್ಲು ಸ್ವಾಗತಿಸಿದರು. ರಶ್ಮಿ ಹೆಗಡೆ ನಿರ್ವಹಿಸಿದರು. ಜಿ.ಎನ್. ಭಟ್ಟ ಸಂದೇಶ ವಾಚಿಸಿದರು. ಗೋಪಾಲಕೃಷ್ಣ ನಂದಿಸರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-20-329676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>