<p>ಯಲ್ಲಾಪುರ: ಪಟ್ಟಣದ ಈಶ್ವರೀ ವಿಶ್ವವಿದ್ಯಾಲಯದ ತಪೋವನದಲ್ಲಿ ಜೂನ್ 6, 7ರಂದು ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ ಕರಿ ಹೇಳಿದರು.</p>.<p>ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.</p>.<p>ಭಾಗವಹಿಸಲು ಆಸಕ್ತರು ಅನಿಲ ಕರಿ (9845329306), ಯೋಗ ಶಿಕ್ಷಕ ಸುಬ್ರಾಯ ಭಟ್ಟ (9482185480), ದಿವಾಕರ ಮರಾಠಿ (9480085532) ಈ ಸಂಖ್ಯೆಯನ್ನು ಸಂಪರ್ಕಿಸಿ ಮೇ 31 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಜೂನ್ 6ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಶಿವರಾಮ ಹೆಬ್ಬಾರ ಕಾರ್ಯಕ್ರಮ ಉದ್ಘಾಟಿಸುವರು.</p>.<p>ರಾಜ್ಯ ಘಟಕದ ಅಧ್ಯಕ್ಷ ಪಿ.ಎನ್. ಗಣೇಶಕುಮಾರ ಅಧ್ಯಕ್ಷತೆ ವಹಿಸುವರು. ಅಸೋಸಿಯೇಷನ್ ಚೇರ್ಮನ್ ಜಿ.ಎನ್.ಕೃಷ್ಣಮೂರ್ತಿ ಭಾಗವಹಿಸುವರು. ಮುಕ್ತಾ ಶಂಕರ ಗಮಕ ವಾಚನಕಾರರಾಗಿ ಮತ್ತು ಡಿ.ಕೆ. ಗಾಂವ್ಕರ ವ್ಯಾಖ್ಯಾನಕಾರರಾಗಿ ಭಾಗವಹಿಸುವರು. ಸಂಜೆ ಸಮಾರೋಪ ನಡೆಯಲಿದ್ದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳುವರು ಎಂದರು.</p>.<p>ಯೋಗಾಸನ ಸ್ಪರ್ಧಾ ಸ್ವಾಗತ ಸಮಿತಿಯ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಕಾರ್ಯಾಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ, ಪ್ರಧಾನ ಕಾರ್ಯದರ್ಶಿ ಸುಬ್ರಾಯ ಭಟ್ಟ ಆನೇಜಡ್ಡಿ, ಸ್ವಾಗತ ಸಮಿತಿಯ ಪ್ರಮುಖರಾದ ಡಿ.ಎನ್.ಗಾಂವ್ಕರ, ಕನಕಪ್ಪ, ಕೆ.ಟಿ.ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-1737163043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ: ಪಟ್ಟಣದ ಈಶ್ವರೀ ವಿಶ್ವವಿದ್ಯಾಲಯದ ತಪೋವನದಲ್ಲಿ ಜೂನ್ 6, 7ರಂದು ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ ಕರಿ ಹೇಳಿದರು.</p>.<p>ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.</p>.<p>ಭಾಗವಹಿಸಲು ಆಸಕ್ತರು ಅನಿಲ ಕರಿ (9845329306), ಯೋಗ ಶಿಕ್ಷಕ ಸುಬ್ರಾಯ ಭಟ್ಟ (9482185480), ದಿವಾಕರ ಮರಾಠಿ (9480085532) ಈ ಸಂಖ್ಯೆಯನ್ನು ಸಂಪರ್ಕಿಸಿ ಮೇ 31 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಜೂನ್ 6ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಶಿವರಾಮ ಹೆಬ್ಬಾರ ಕಾರ್ಯಕ್ರಮ ಉದ್ಘಾಟಿಸುವರು.</p>.<p>ರಾಜ್ಯ ಘಟಕದ ಅಧ್ಯಕ್ಷ ಪಿ.ಎನ್. ಗಣೇಶಕುಮಾರ ಅಧ್ಯಕ್ಷತೆ ವಹಿಸುವರು. ಅಸೋಸಿಯೇಷನ್ ಚೇರ್ಮನ್ ಜಿ.ಎನ್.ಕೃಷ್ಣಮೂರ್ತಿ ಭಾಗವಹಿಸುವರು. ಮುಕ್ತಾ ಶಂಕರ ಗಮಕ ವಾಚನಕಾರರಾಗಿ ಮತ್ತು ಡಿ.ಕೆ. ಗಾಂವ್ಕರ ವ್ಯಾಖ್ಯಾನಕಾರರಾಗಿ ಭಾಗವಹಿಸುವರು. ಸಂಜೆ ಸಮಾರೋಪ ನಡೆಯಲಿದ್ದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳುವರು ಎಂದರು.</p>.<p>ಯೋಗಾಸನ ಸ್ಪರ್ಧಾ ಸ್ವಾಗತ ಸಮಿತಿಯ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಕಾರ್ಯಾಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ, ಪ್ರಧಾನ ಕಾರ್ಯದರ್ಶಿ ಸುಬ್ರಾಯ ಭಟ್ಟ ಆನೇಜಡ್ಡಿ, ಸ್ವಾಗತ ಸಮಿತಿಯ ಪ್ರಮುಖರಾದ ಡಿ.ಎನ್.ಗಾಂವ್ಕರ, ಕನಕಪ್ಪ, ಕೆ.ಟಿ.ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-1737163043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>