<p><strong>ಯಲ್ಲಾಪುರ:</strong> ‘ಒಂದು ತಂಡವಾಗಿ ಕೆಲಸ ಮಾಡಿದಾಗ ಸಂಘಟನೆಗೆ ಶಕ್ತಿ ಬರಲಿದೆ. ನಾವು ಗುಣವಂತರಾಗಬೇಕು, ಶೀಲವಂತರಾಗಬೇಕು ಆ ಮೂಲಕ ಸಂಘಟನೆಗೆ ಬಲ ತುಂಬಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಉಪಾಧ್ಯಕ್ಷ ಗಂಗಾಧರ ಹೆಗಡೆ ಹೇಳಿದರು.</p>.<p>ಪಟ್ಟಣದ ವಿಶ್ವದರ್ಶನ ಆವರಣದಲ್ಲಿ ಶನಿವಾರ ನಡೆದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕರ್ನಾಟಕ ಪ್ರಾಂತ ಶೌರ್ಯ ಪ್ರಶಿಕ್ಷಣ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮೆಲ್ಲರಲ್ಲೂ ಶಕ್ತಿ ಇದೆ, ಅದಕ್ಕೆ ಪರಿಪೂರ್ಣ ರೂಪ ನೀಡಬೇಕಾಗಿದೆ. ರಾಷ್ಟ್ರದ ಕೆಲಸ ಮಾಡಲು ಸಾಕಷ್ಟು ಸವಾಲುಗಳಿವೆ, ಅದನ್ನು ಎದುರಿಸಲು ಶಿಸ್ತು ಬದ್ಧ ಮಾರ್ಗದರ್ಶನದ ಅಗತ್ಯ. ಅಂತಹ ಮಾರ್ಗದರ್ಶನ ಶಿಬಿರದಲ್ಲಿ ಲಭಿಸಲಿದೆ’ ಎಂದರು.</p>.<p>ಕ್ಷೇತ್ರೀಯ ಧರ್ಮ ಪ್ರಸಾರ ಪ್ರಮುಖ ಸೂರ್ಯನಾರಾಯಣ ಮಾತನಾಡಿ, ‘ಇತಿಹಾಸವನ್ನು ಮುಂದಿನ ಸಮಾಜಕ್ಕೆ ದಾಟಿಸಲು ಸಮಾಜ ಸಂಘಟನೆ ಬಲಗೊಳ್ಳಬೇಕಿದೆ. ಹಿಂದೂಗಳಿಗೆ ಇರುವ ಒಂದೇ ದೇಶ ಭಾರತ. ಅದನ್ನು ಭಾರತವಾಗಿ ಉಳಿಸಿಕೊಳ್ಳಬೇಕಿದೆ. ನಿಸ್ವಾರ್ಥವಾಗಿ ದೇಶ ಸೇವೆ ಮಾಡಬೇಕು. ಇದಕ್ಕಾಗಿ ಯುವಕರು ಬಲಗೊಳ್ಳಬೇಕು’ ಎಂದರು.</p>.<p>ಜಿಲ್ಲಾ ಪ್ರಚಾರಕ ಗಣೇಶ ಮಾತನಾಡಿ, ‘ಶಿಕ್ಷಣದಿಂದ ಉತ್ತಮ ಸಂಸ್ಕಾರ ಗಳಿಕೆಯೊಂದಿಗೆ ನಮ್ಮ ವ್ಯಕ್ತಿತ್ವ ನಿರ್ಮಾಣವಾಗಬೇಕು. ನಾವು ಕಲಿತ ಸಂಸ್ಕಾರ ನಮ್ಮ ಜೀವನವನ್ನು ಸುಗಮದಾರಿಗೆ ಕರೆದೊಯ್ಯುತ್ತದೆ’ ಎಂದರು.</p>.<p>ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎನ್. ಭಟ್ಟ ಏಕಾನ, ಪ್ರಾಂತ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ ಸೂರ್ಯ, ಭಜರಂಗದಳದ ಪ್ರಾಂತ ಸಂಯೋಜಕ ಬಸವರಾಜ ಸೂಗೂರ, ಪ್ರಾಂತ ಸಹಕಾರ್ಯದರ್ಶಿ ಪುಂಡಲೀಕ ದಳವಾಯಿ, ಪ್ರಮುಖರಾದ ಶಿವಾನಂದ ಸತ್ತಿಗೇರಿ, ಮಲ್ಲಿಕಾರ್ಜುನ ಸತ್ತಿಗೇರಿ ಇದ್ದರು.</p>.<p>ಚಿದಾನಂದ ವೈಯಕ್ತಿಕ ಗೀತೆ ಹಾಡಿದರು. ಮಲ್ಲಿಕಾರ್ಜುನ ಎಚ್. ನಿರೂಪಿಸಿದರು. ಕರ್ನಾಟಕ ಉತ್ತರ ಪ್ರಾಂತದ 18 ಜಿಲ್ಲೆಗಳಿಂದ ಆಗಮಿಸಿದ 150ಕ್ಕೂ ಅಧಿಕ ಪ್ರಶಿಕ್ಷಣಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-20-1929678100</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ:</strong> ‘ಒಂದು ತಂಡವಾಗಿ ಕೆಲಸ ಮಾಡಿದಾಗ ಸಂಘಟನೆಗೆ ಶಕ್ತಿ ಬರಲಿದೆ. ನಾವು ಗುಣವಂತರಾಗಬೇಕು, ಶೀಲವಂತರಾಗಬೇಕು ಆ ಮೂಲಕ ಸಂಘಟನೆಗೆ ಬಲ ತುಂಬಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಉಪಾಧ್ಯಕ್ಷ ಗಂಗಾಧರ ಹೆಗಡೆ ಹೇಳಿದರು.</p>.<p>ಪಟ್ಟಣದ ವಿಶ್ವದರ್ಶನ ಆವರಣದಲ್ಲಿ ಶನಿವಾರ ನಡೆದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕರ್ನಾಟಕ ಪ್ರಾಂತ ಶೌರ್ಯ ಪ್ರಶಿಕ್ಷಣ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮೆಲ್ಲರಲ್ಲೂ ಶಕ್ತಿ ಇದೆ, ಅದಕ್ಕೆ ಪರಿಪೂರ್ಣ ರೂಪ ನೀಡಬೇಕಾಗಿದೆ. ರಾಷ್ಟ್ರದ ಕೆಲಸ ಮಾಡಲು ಸಾಕಷ್ಟು ಸವಾಲುಗಳಿವೆ, ಅದನ್ನು ಎದುರಿಸಲು ಶಿಸ್ತು ಬದ್ಧ ಮಾರ್ಗದರ್ಶನದ ಅಗತ್ಯ. ಅಂತಹ ಮಾರ್ಗದರ್ಶನ ಶಿಬಿರದಲ್ಲಿ ಲಭಿಸಲಿದೆ’ ಎಂದರು.</p>.<p>ಕ್ಷೇತ್ರೀಯ ಧರ್ಮ ಪ್ರಸಾರ ಪ್ರಮುಖ ಸೂರ್ಯನಾರಾಯಣ ಮಾತನಾಡಿ, ‘ಇತಿಹಾಸವನ್ನು ಮುಂದಿನ ಸಮಾಜಕ್ಕೆ ದಾಟಿಸಲು ಸಮಾಜ ಸಂಘಟನೆ ಬಲಗೊಳ್ಳಬೇಕಿದೆ. ಹಿಂದೂಗಳಿಗೆ ಇರುವ ಒಂದೇ ದೇಶ ಭಾರತ. ಅದನ್ನು ಭಾರತವಾಗಿ ಉಳಿಸಿಕೊಳ್ಳಬೇಕಿದೆ. ನಿಸ್ವಾರ್ಥವಾಗಿ ದೇಶ ಸೇವೆ ಮಾಡಬೇಕು. ಇದಕ್ಕಾಗಿ ಯುವಕರು ಬಲಗೊಳ್ಳಬೇಕು’ ಎಂದರು.</p>.<p>ಜಿಲ್ಲಾ ಪ್ರಚಾರಕ ಗಣೇಶ ಮಾತನಾಡಿ, ‘ಶಿಕ್ಷಣದಿಂದ ಉತ್ತಮ ಸಂಸ್ಕಾರ ಗಳಿಕೆಯೊಂದಿಗೆ ನಮ್ಮ ವ್ಯಕ್ತಿತ್ವ ನಿರ್ಮಾಣವಾಗಬೇಕು. ನಾವು ಕಲಿತ ಸಂಸ್ಕಾರ ನಮ್ಮ ಜೀವನವನ್ನು ಸುಗಮದಾರಿಗೆ ಕರೆದೊಯ್ಯುತ್ತದೆ’ ಎಂದರು.</p>.<p>ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎನ್. ಭಟ್ಟ ಏಕಾನ, ಪ್ರಾಂತ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ ಸೂರ್ಯ, ಭಜರಂಗದಳದ ಪ್ರಾಂತ ಸಂಯೋಜಕ ಬಸವರಾಜ ಸೂಗೂರ, ಪ್ರಾಂತ ಸಹಕಾರ್ಯದರ್ಶಿ ಪುಂಡಲೀಕ ದಳವಾಯಿ, ಪ್ರಮುಖರಾದ ಶಿವಾನಂದ ಸತ್ತಿಗೇರಿ, ಮಲ್ಲಿಕಾರ್ಜುನ ಸತ್ತಿಗೇರಿ ಇದ್ದರು.</p>.<p>ಚಿದಾನಂದ ವೈಯಕ್ತಿಕ ಗೀತೆ ಹಾಡಿದರು. ಮಲ್ಲಿಕಾರ್ಜುನ ಎಚ್. ನಿರೂಪಿಸಿದರು. ಕರ್ನಾಟಕ ಉತ್ತರ ಪ್ರಾಂತದ 18 ಜಿಲ್ಲೆಗಳಿಂದ ಆಗಮಿಸಿದ 150ಕ್ಕೂ ಅಧಿಕ ಪ್ರಶಿಕ್ಷಣಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-20-1929678100</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>