<p><strong>ಜೊಯಿಡಾ:</strong> ಶ್ರಾವಣ ಮಾಸದ ಅಂಗವಾಗಿ ತಾಲ್ಲೂಕಿನ ಶ್ರೀಕ್ಷೇತ್ರ ಉಳವಿ ಚನ್ನಬಸವೇಶ್ವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಶ್ರಾವಣ ಸೋಮವಾರ ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದರು.</p>.<p>ರಾಜ್ಯದ ಹಾವೇರಿ, ಧಾರವಾಡ, ಕಲಘಟಗಿ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ, ಬೈಲಹೊಂಗಲ ಭಾಗದಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರು ಸೋಮವಾರ ಉಳವಿ ಚನ್ನಬಸವೇಶ್ವರ ದರ್ಶನಕ್ಕೆ ಬಂದಿದ್ದು ಜಾತ್ರಾ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು.</p>.<p>ಶ್ರಾವಣ ಸೋಮವಾರದ ಅಂಗವಾಗಿ ದಾಂಡೇಲಿ, ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬೈಕ್ ಹಾಗೂ ಟ್ರ್ಯಾಕ್ಟರ್ಗಳಲ್ಲಿಯೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಉಳಿವಿಗೆ ಆಗಮಿಸಿದ್ದರು. ಶ್ರಾವಣ ಮಾಸದ ಸೋಮವಾರದಂದು ಬರುವ ಭಕ್ತರಿಗೆ ವಿಶೇಷ ದಾಸೋಹ ವ್ಯವಸ್ಥೆಯನ್ನು ಮಾಡಲಾಗುತ್ತದೆ.</p>.<p>ಉಳಿವಿಗೆ ಬಹುತೇಕ ಅಧಿಕ ಸಂಖ್ಯೆಯಲ್ಲಿ ಉತ್ತರ ಕರ್ನಾಟಕದ ಭಕ್ತರು ಬರುತ್ತಿದ್ದು, ಉಳವಿ ಸೇರಿದಂತೆ ಜೊಯಿಡಾ, ಕುಂಭಾರವಾಡದಲ್ಲಿ ಚಹಾದ ಅಂಗಡಿಗಳಲ್ಲಿ ಬೊಂಡಾ ಬಜ್ಜಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸುತ್ತಾರೆ. ಇದರಿಂದಾಗಿ ಈ ಭಾಗದ ಬೊಂಡಾ ಬಜ್ಜಿ ವ್ಯಾಪಾರಸ್ಥರು ಭರ್ಜರಿ ವ್ಯಾಪಾರ ವಹಿವಾಟು ನಡೆಸಿದರು.</p>.<p>ಉಳವಿಗೆ ಬರುವ ಬಸ್ಗಳು ಭಕ್ತರಿಂದ ತುಂಬಿ ಸಂಚರಿಸುವುದರಿಂದ ಸ್ಥಳೀಯ ಪ್ರಯಾಣಿಕರು ಮತ್ತು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ:</strong> ಶ್ರಾವಣ ಮಾಸದ ಅಂಗವಾಗಿ ತಾಲ್ಲೂಕಿನ ಶ್ರೀಕ್ಷೇತ್ರ ಉಳವಿ ಚನ್ನಬಸವೇಶ್ವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಶ್ರಾವಣ ಸೋಮವಾರ ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದರು.</p>.<p>ರಾಜ್ಯದ ಹಾವೇರಿ, ಧಾರವಾಡ, ಕಲಘಟಗಿ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ, ಬೈಲಹೊಂಗಲ ಭಾಗದಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರು ಸೋಮವಾರ ಉಳವಿ ಚನ್ನಬಸವೇಶ್ವರ ದರ್ಶನಕ್ಕೆ ಬಂದಿದ್ದು ಜಾತ್ರಾ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು.</p>.<p>ಶ್ರಾವಣ ಸೋಮವಾರದ ಅಂಗವಾಗಿ ದಾಂಡೇಲಿ, ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬೈಕ್ ಹಾಗೂ ಟ್ರ್ಯಾಕ್ಟರ್ಗಳಲ್ಲಿಯೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಉಳಿವಿಗೆ ಆಗಮಿಸಿದ್ದರು. ಶ್ರಾವಣ ಮಾಸದ ಸೋಮವಾರದಂದು ಬರುವ ಭಕ್ತರಿಗೆ ವಿಶೇಷ ದಾಸೋಹ ವ್ಯವಸ್ಥೆಯನ್ನು ಮಾಡಲಾಗುತ್ತದೆ.</p>.<p>ಉಳಿವಿಗೆ ಬಹುತೇಕ ಅಧಿಕ ಸಂಖ್ಯೆಯಲ್ಲಿ ಉತ್ತರ ಕರ್ನಾಟಕದ ಭಕ್ತರು ಬರುತ್ತಿದ್ದು, ಉಳವಿ ಸೇರಿದಂತೆ ಜೊಯಿಡಾ, ಕುಂಭಾರವಾಡದಲ್ಲಿ ಚಹಾದ ಅಂಗಡಿಗಳಲ್ಲಿ ಬೊಂಡಾ ಬಜ್ಜಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸುತ್ತಾರೆ. ಇದರಿಂದಾಗಿ ಈ ಭಾಗದ ಬೊಂಡಾ ಬಜ್ಜಿ ವ್ಯಾಪಾರಸ್ಥರು ಭರ್ಜರಿ ವ್ಯಾಪಾರ ವಹಿವಾಟು ನಡೆಸಿದರು.</p>.<p>ಉಳವಿಗೆ ಬರುವ ಬಸ್ಗಳು ಭಕ್ತರಿಂದ ತುಂಬಿ ಸಂಚರಿಸುವುದರಿಂದ ಸ್ಥಳೀಯ ಪ್ರಯಾಣಿಕರು ಮತ್ತು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>