ಕಾರವಾರ: ‘ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ವಸತಿ ನಿಲಯಗಳು ಹಾಗೂ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ಕಡ್ಡಾಯವಾಗಿ ವಸತಿ ನಿಲಯ ಹಾಗೂ ವಸತಿಯುತ ಶಾಲೆಗಳಲ್ಲಿಪ್ರತಿ ವಾರ ಒಂದು ರಾತ್ರಿ ಕಡ್ಡಾಯವಾಗಿ ವಾಸ್ತವ್ಯ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಿಯಾಂಗಾ.ಎಂ ಆದೇಶಿಸಿದ್ದಾರೆ.