<p><strong>ಕಾರವಾರ: </strong>ಒಂದು ವರ್ಷ ಎರಡು ತಿಂಗಳು ಕೆಲಸ ಮಾಡಲು ಬಹಳ ದೊಡ್ಡ ಅವಧಿಯೇನಲ್ಲ. ಆದರೂ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಹೇಳಿದರು.<br /> <br /> ಇಲ್ಲಿಯ ವಾರ್ತಾ ಇಲಾಖೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆ ಸಿಬ್ಬಂದಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಆಡಳಿತ ನಡೆಸುವ ಸಂದರ್ಭದಲ್ಲಿ ನನ್ನಿಂದ ಅತಿರೇಕದ ವರ್ತನೆಗಳು ಆಗಿದಲ್ಲಿ ಅನ್ಯತಾ ಭಾವಿಸಬಾರದು ಎಂದರು.<br /> <br /> ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಪ್ರೋತ್ಸಾಹ ಹಾಗೂ ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ. ಜಿಲ್ಲೆಯ, ಸಚಿವರು, ಸಂಸದರು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಿಂದಲೂ ಸಲಹೆ, ಮಾರ್ಗದರ್ಶಗಳನ್ನು ಪಡೆದು ಕೆಲಸ ಮಾಡಿದ ತೃಪ್ತಿ ನನಗಿದೆ ಎಂದರು.<br /> <br /> ಹಿರಿಯ ಪತ್ರಕರ್ತ ಆರ್.ಎಸ್. ಹಬ್ಬು ಮಾತನಾಡಿ, ನಿರಾಶ್ರಿತರ ಸಮಸ್ಯೆ ಪರಿಸರ ಮತ್ತು ಸಂಸ್ಕೃತಿಯ ಬಗ್ಗೆ ಕಾಳಜಿಯುಳ್ಳ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ. ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮನೋಭಾವ ಅವರದ್ದು. ಪತ್ರಕರ್ತನಾಗಿ ಬಹಳಷ್ಟು ಜಿಲ್ಲಾಧಿಕಾರಿಗಳನ್ನು ನೋಡಿದ್ದೇನೆ ಇಂತಹ ಜನಪರ ಜಿಲ್ಲಾಧಿಕಾರಿಯನ್ನು ನೋಡಿರಲಿಲ್ಲ ಎಂದರು.<br /> <br /> ಇಲ್ಲಿಯ ಕಡಲತೀರದಲ್ಲಿರುವ 13 ಎಕರೆ ಜಮೀನು ಕಡಲ್ಗಾವಲು ಪಡೆಗೆ ಸರ್ಕಾರ ನೀಡಿದಾಗ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳೇ ಆಸಕ್ತಿ ವಹಿಸಿ ಜನರ ಭಾವನೆಗಳಿಗೆ ಸ್ಪಂದಿಸಿ, ಜಮೀನು ಕಡಲ್ಗಾವಲು ಪಡೆಯ ಪಾಲಾಗದಂತೆ ನೋಡಿಕೊಂಡರು. ಪರಿಸರದ ವಿಷಯದಲ್ಲೂ ಜಿಲ್ಲಾಧಿಕಾರಿ ಗಳು ಹೆಚ್ಚಿನ ಆಸಕ್ತಿಯನ್ನು ಹೊಂದಿ ದ್ದರು ಎಂದು ಹಬ್ಬು ಹೇಳಿದರು.<br /> <br /> ಪತ್ರಕರ್ತ ಮಂಜೂರ ಫಾಹಿಮ್ ಮಾತನಾಡಿದರು. ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾ ನಾಯ್ಕ. ಪತ್ರಕರ್ತ ಟಿ.ಬಿ.ಹರಿಕಾಂತ, ಸಿ.ಡಿ.ಜೋಶಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೆ.ಎಚ್. ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಒಂದು ವರ್ಷ ಎರಡು ತಿಂಗಳು ಕೆಲಸ ಮಾಡಲು ಬಹಳ ದೊಡ್ಡ ಅವಧಿಯೇನಲ್ಲ. ಆದರೂ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಹೇಳಿದರು.<br /> <br /> ಇಲ್ಲಿಯ ವಾರ್ತಾ ಇಲಾಖೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆ ಸಿಬ್ಬಂದಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಆಡಳಿತ ನಡೆಸುವ ಸಂದರ್ಭದಲ್ಲಿ ನನ್ನಿಂದ ಅತಿರೇಕದ ವರ್ತನೆಗಳು ಆಗಿದಲ್ಲಿ ಅನ್ಯತಾ ಭಾವಿಸಬಾರದು ಎಂದರು.<br /> <br /> ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಪ್ರೋತ್ಸಾಹ ಹಾಗೂ ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ. ಜಿಲ್ಲೆಯ, ಸಚಿವರು, ಸಂಸದರು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಿಂದಲೂ ಸಲಹೆ, ಮಾರ್ಗದರ್ಶಗಳನ್ನು ಪಡೆದು ಕೆಲಸ ಮಾಡಿದ ತೃಪ್ತಿ ನನಗಿದೆ ಎಂದರು.<br /> <br /> ಹಿರಿಯ ಪತ್ರಕರ್ತ ಆರ್.ಎಸ್. ಹಬ್ಬು ಮಾತನಾಡಿ, ನಿರಾಶ್ರಿತರ ಸಮಸ್ಯೆ ಪರಿಸರ ಮತ್ತು ಸಂಸ್ಕೃತಿಯ ಬಗ್ಗೆ ಕಾಳಜಿಯುಳ್ಳ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ. ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮನೋಭಾವ ಅವರದ್ದು. ಪತ್ರಕರ್ತನಾಗಿ ಬಹಳಷ್ಟು ಜಿಲ್ಲಾಧಿಕಾರಿಗಳನ್ನು ನೋಡಿದ್ದೇನೆ ಇಂತಹ ಜನಪರ ಜಿಲ್ಲಾಧಿಕಾರಿಯನ್ನು ನೋಡಿರಲಿಲ್ಲ ಎಂದರು.<br /> <br /> ಇಲ್ಲಿಯ ಕಡಲತೀರದಲ್ಲಿರುವ 13 ಎಕರೆ ಜಮೀನು ಕಡಲ್ಗಾವಲು ಪಡೆಗೆ ಸರ್ಕಾರ ನೀಡಿದಾಗ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳೇ ಆಸಕ್ತಿ ವಹಿಸಿ ಜನರ ಭಾವನೆಗಳಿಗೆ ಸ್ಪಂದಿಸಿ, ಜಮೀನು ಕಡಲ್ಗಾವಲು ಪಡೆಯ ಪಾಲಾಗದಂತೆ ನೋಡಿಕೊಂಡರು. ಪರಿಸರದ ವಿಷಯದಲ್ಲೂ ಜಿಲ್ಲಾಧಿಕಾರಿ ಗಳು ಹೆಚ್ಚಿನ ಆಸಕ್ತಿಯನ್ನು ಹೊಂದಿ ದ್ದರು ಎಂದು ಹಬ್ಬು ಹೇಳಿದರು.<br /> <br /> ಪತ್ರಕರ್ತ ಮಂಜೂರ ಫಾಹಿಮ್ ಮಾತನಾಡಿದರು. ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾ ನಾಯ್ಕ. ಪತ್ರಕರ್ತ ಟಿ.ಬಿ.ಹರಿಕಾಂತ, ಸಿ.ಡಿ.ಜೋಶಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೆ.ಎಚ್. ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>