<p><strong>ಕಾರವಾರ:</strong> ಚಾರಧಾಮ್ ಯಾತ್ರೆಗೆ ಹೋಗಿ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿರುವ ಜಿಲ್ಲೆಯ ಒಂಬತ್ತು ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ಗುರುವಾರ `ಪ್ರಜಾವಾಣಿ'ಗೆ ತಿಳಿಸಿವೆ.<br /> <br /> ಕೇದಾರನಾಥ ಸಮೀಪ ಮನುಕಟಿಯಾರ್ ಪರ್ವತ ಪ್ರದೇಶದಲ್ಲಿ ಸಿಕ್ಕಿಹಾಕಿಕೊಂಡಿರುವ ಸುಮಾರು 200ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣಾ ಪಡೆಯ ಯೋಧರು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ಗೊತ್ತಾಗಿದೆ.<br /> <br /> ಕೇದಾರನಾಥ ಸುತ್ತಮುತ್ತಲು ಭೂಕುಸಿತದಿಂದಾಗಿ ರಸ್ತೆ ಸಂಪರ್ಕ ಕಡಿದುಹೋಗಿದ್ದರಿಂದ ಯಾತ್ರಾರ್ಥಿಗಳನ್ನು ಕೇಂದ್ರ ಸ್ಥಾನಕ್ಕೆ ಕರೆತರಲು ಸಾಧ್ಯವಾಗುತ್ತಿಲ್ಲ. ರಸ್ತೆ ದುರಸ್ತಿಕಾರ್ಯ ನಡೆಯುತ್ತಿದ್ದು ಒಂದೆರಡು ದಿನದೊಳಗೆ ಯಾತ್ರಾರ್ಥಿಗಳು ಕೇಂದ್ರ ಸ್ಥಾನಕ್ಕೆ ಬರಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.<br /> <br /> ಜಿಲ್ಲೆಯ ಒಂಬತ್ತು ಯಾತ್ರಾರ್ಥಿಗಳ ಬಳಿಯಿದ್ದ ಮೊಬೈಲ್ ಫೋನ್ಗಳು ಸ್ವೀಚ್ಡ್ ಆಫ್ ಆಗಿದ್ದರಿಂದ ಅವರೊಂದಿಗೆ ಸಂಪರ್ಕ ಸಾಧ್ಯವಾಗುತ್ತಿಲ್ಲ.<br /> ಪರಿಸ್ಥಿತಿ ಭಯಾನಕ: ಅಲಕನಂದಾ, ಮಂದಾಕಿನಿ, ಬಾಗೀರಥಿ ಮತ್ತು ಗಂಗಾ ನದಿ ಉಕ್ಕಿ ಹರಿದಿದ್ದರಿಂದ ಹೃಷಿಕೇಶ, ಕೇದರಾನಾಥ, ಬದರೀನಾಥದಲ್ಲಿ ಪರಿಸ್ಥಿತಿ ಭಯಾನಕವಾಗಿದೆ ಎಂದು ಸಂತ್ರಸ್ತರ ನೆರವಿಗೆ ಧಾವಿಸಿರುವ ಇಲ್ಲಿಯ ಪತಂಜಲಿ ಯೋಗ ಪೀಠದ ಪ್ರಮುಖ ಬಿ.ಜಿ.ಮೋಹನ ಹೇಳಿದ್ದಾರೆ.<br /> <br /> ಹೃಷಕೇಶದಿಂದ ದೂರವಾಣಿಯಲ್ಲಿ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಅವರು, ಪ್ರವಾಹ ಬಂದಿದ್ದರಿಂದ ನದಿ ಹರಿವ ಮಟ್ಟಕ್ಕಿಂತ ಸುಮಾರು 5ರಿಂದ 6 ಮೀಟರ್ ಎತ್ತರದಲ್ಲಿ ಹರಿದಿದೆ. ನೀರಿನ ರಭಸ ಎಷ್ಟಿತ್ತೆಂದರೆ ದಾರಿಯಲ್ಲಿ ಸಿಕ್ಕ ಮನೆ, ಕಟ್ಟಡಗಳೆಲ್ಲವನ್ನೂ ಕೊಚ್ಚಿಕೊಂಡು ಹೋಗಿದೆ.<br /> ಕೆಸರಿನಡಿ ಹೂತುಹೋದವರು, ಕಟ್ಟಡದಲ್ಲಿದ್ದು ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋದ ಯಾತ್ರಾರ್ಥಿಗಳ ಸಂಖ್ಯೆ ಲೆಕ್ಕಕ್ಕೆ ಸಿಗುತ್ತಿಲ್ಲ ಎಂದು ಅಲ್ಲಿಯ ಚಿತ್ರಣವನ್ನು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಚಾರಧಾಮ್ ಯಾತ್ರೆಗೆ ಹೋಗಿ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿರುವ ಜಿಲ್ಲೆಯ ಒಂಬತ್ತು ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ಗುರುವಾರ `ಪ್ರಜಾವಾಣಿ'ಗೆ ತಿಳಿಸಿವೆ.<br /> <br /> ಕೇದಾರನಾಥ ಸಮೀಪ ಮನುಕಟಿಯಾರ್ ಪರ್ವತ ಪ್ರದೇಶದಲ್ಲಿ ಸಿಕ್ಕಿಹಾಕಿಕೊಂಡಿರುವ ಸುಮಾರು 200ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣಾ ಪಡೆಯ ಯೋಧರು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ಗೊತ್ತಾಗಿದೆ.<br /> <br /> ಕೇದಾರನಾಥ ಸುತ್ತಮುತ್ತಲು ಭೂಕುಸಿತದಿಂದಾಗಿ ರಸ್ತೆ ಸಂಪರ್ಕ ಕಡಿದುಹೋಗಿದ್ದರಿಂದ ಯಾತ್ರಾರ್ಥಿಗಳನ್ನು ಕೇಂದ್ರ ಸ್ಥಾನಕ್ಕೆ ಕರೆತರಲು ಸಾಧ್ಯವಾಗುತ್ತಿಲ್ಲ. ರಸ್ತೆ ದುರಸ್ತಿಕಾರ್ಯ ನಡೆಯುತ್ತಿದ್ದು ಒಂದೆರಡು ದಿನದೊಳಗೆ ಯಾತ್ರಾರ್ಥಿಗಳು ಕೇಂದ್ರ ಸ್ಥಾನಕ್ಕೆ ಬರಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.<br /> <br /> ಜಿಲ್ಲೆಯ ಒಂಬತ್ತು ಯಾತ್ರಾರ್ಥಿಗಳ ಬಳಿಯಿದ್ದ ಮೊಬೈಲ್ ಫೋನ್ಗಳು ಸ್ವೀಚ್ಡ್ ಆಫ್ ಆಗಿದ್ದರಿಂದ ಅವರೊಂದಿಗೆ ಸಂಪರ್ಕ ಸಾಧ್ಯವಾಗುತ್ತಿಲ್ಲ.<br /> ಪರಿಸ್ಥಿತಿ ಭಯಾನಕ: ಅಲಕನಂದಾ, ಮಂದಾಕಿನಿ, ಬಾಗೀರಥಿ ಮತ್ತು ಗಂಗಾ ನದಿ ಉಕ್ಕಿ ಹರಿದಿದ್ದರಿಂದ ಹೃಷಿಕೇಶ, ಕೇದರಾನಾಥ, ಬದರೀನಾಥದಲ್ಲಿ ಪರಿಸ್ಥಿತಿ ಭಯಾನಕವಾಗಿದೆ ಎಂದು ಸಂತ್ರಸ್ತರ ನೆರವಿಗೆ ಧಾವಿಸಿರುವ ಇಲ್ಲಿಯ ಪತಂಜಲಿ ಯೋಗ ಪೀಠದ ಪ್ರಮುಖ ಬಿ.ಜಿ.ಮೋಹನ ಹೇಳಿದ್ದಾರೆ.<br /> <br /> ಹೃಷಕೇಶದಿಂದ ದೂರವಾಣಿಯಲ್ಲಿ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಅವರು, ಪ್ರವಾಹ ಬಂದಿದ್ದರಿಂದ ನದಿ ಹರಿವ ಮಟ್ಟಕ್ಕಿಂತ ಸುಮಾರು 5ರಿಂದ 6 ಮೀಟರ್ ಎತ್ತರದಲ್ಲಿ ಹರಿದಿದೆ. ನೀರಿನ ರಭಸ ಎಷ್ಟಿತ್ತೆಂದರೆ ದಾರಿಯಲ್ಲಿ ಸಿಕ್ಕ ಮನೆ, ಕಟ್ಟಡಗಳೆಲ್ಲವನ್ನೂ ಕೊಚ್ಚಿಕೊಂಡು ಹೋಗಿದೆ.<br /> ಕೆಸರಿನಡಿ ಹೂತುಹೋದವರು, ಕಟ್ಟಡದಲ್ಲಿದ್ದು ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋದ ಯಾತ್ರಾರ್ಥಿಗಳ ಸಂಖ್ಯೆ ಲೆಕ್ಕಕ್ಕೆ ಸಿಗುತ್ತಿಲ್ಲ ಎಂದು ಅಲ್ಲಿಯ ಚಿತ್ರಣವನ್ನು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>