<p><strong>ಜೋಯಿಡಾ: </strong>ಹುಲಿ ಯೋಜನೆ ವಿರೋಧಿಸಿ, ತಾಲ್ಲೂಕಿಗೆ ಮೂಲಭೂತ ಅಭಿವೃದ್ಧಿ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.<br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ರೈತ ಸಂಘದ ರಾಜ್ಯ ಸಮಿತಿ ಕಾರ್ಯದರ್ಶಿ ಜಿ.ಸಿ.ಬಯ್ಯಾರೆಡ್ಡಿ ಮಾತನಾಡಿ, ಜೋಯಿಡಾ ತಾಲ್ಲೂಕಿನ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಕಲ್ಪಿಸಬೇಕು ಎಂದು ಆಗ್ರಹಿಸಿದರು.<br /> <br /> ರಾಜ್ಯದಲ್ಲೇ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟ ಜೋಯಿಡಾ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಮಾಡಬೇಕು. ರಸ್ತೆ-ಸೇತುವೆಗಳ ನಿರ್ಮಾಣ ಆಗಬೇಕು. ಶಿಕ್ಷಕರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕೊಡಬೇಕು, ಹುಲಿ ಯೋಜನೆ ಕೈಬಿಡಬೇಕು ಎಂದರು.<br /> <br /> ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಮಂಜುನಾಥ ಪುಲಕರ, ಜಿಲ್ಲಾ ಕಾರ್ಯದರ್ಶಿ ಶಾಂತಾರಾಮ ನಾಯಕ , ತಾಲ್ಲೂಕು ಕಾರ್ಯದರ್ಶಿ ಪ್ರೇಮಾನಂದ ವೇಳಿಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. <br /> ತಾಲ್ಲೂಕು ಸಮಿತಿ ಅಧ್ಯಕ್ಷ ನಾರಾಯಣ ವೇಳಿಪ, ಕಾರ್ಮಿಕ ಮುಖಂಡರಾದ ಯಮುನಾ ಗಾಂವಕರ, ರೈತ ಸಂಘದ ದಿಗಂಬರ ದೇಸಾಯಿ, ರಾಜೇಶ ಗೌಡ , ಶಾಂತಾ ವೇಳಿಪ, ಬಾಳಸೋ ಕುಂಡಲಕರ, ಅನಂತ ದೇಸಾಯಿ, ಮಾಹಾದೇವ ಮಿರಾಶಿ, ದತ್ತಾ ದೇಸಾಯಿ, ರವಿ ಡಿಗ್ಗಿ ಹಾಜರಿದ್ದರು.<br /> <br /> ಬೇಡಿಕೆಗಳ ಬಗ್ಗೆ ಜೋಯಿಡಾ ತಹಶೀಲ್ದಾರ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಮನವಿ ನೀಡಲಾಗಿದ್ದು, ಪ್ರಮುಖ ಬೇಡಿಕೆಗಳು ಈಡೇರಿಸುವವರೆಗೂ ಹೋರಾಟ ಮುಂದುವರಿಸಲು ಸಂಘ ತಿರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋಯಿಡಾ: </strong>ಹುಲಿ ಯೋಜನೆ ವಿರೋಧಿಸಿ, ತಾಲ್ಲೂಕಿಗೆ ಮೂಲಭೂತ ಅಭಿವೃದ್ಧಿ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.<br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ರೈತ ಸಂಘದ ರಾಜ್ಯ ಸಮಿತಿ ಕಾರ್ಯದರ್ಶಿ ಜಿ.ಸಿ.ಬಯ್ಯಾರೆಡ್ಡಿ ಮಾತನಾಡಿ, ಜೋಯಿಡಾ ತಾಲ್ಲೂಕಿನ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಕಲ್ಪಿಸಬೇಕು ಎಂದು ಆಗ್ರಹಿಸಿದರು.<br /> <br /> ರಾಜ್ಯದಲ್ಲೇ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟ ಜೋಯಿಡಾ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಮಾಡಬೇಕು. ರಸ್ತೆ-ಸೇತುವೆಗಳ ನಿರ್ಮಾಣ ಆಗಬೇಕು. ಶಿಕ್ಷಕರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕೊಡಬೇಕು, ಹುಲಿ ಯೋಜನೆ ಕೈಬಿಡಬೇಕು ಎಂದರು.<br /> <br /> ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಮಂಜುನಾಥ ಪುಲಕರ, ಜಿಲ್ಲಾ ಕಾರ್ಯದರ್ಶಿ ಶಾಂತಾರಾಮ ನಾಯಕ , ತಾಲ್ಲೂಕು ಕಾರ್ಯದರ್ಶಿ ಪ್ರೇಮಾನಂದ ವೇಳಿಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. <br /> ತಾಲ್ಲೂಕು ಸಮಿತಿ ಅಧ್ಯಕ್ಷ ನಾರಾಯಣ ವೇಳಿಪ, ಕಾರ್ಮಿಕ ಮುಖಂಡರಾದ ಯಮುನಾ ಗಾಂವಕರ, ರೈತ ಸಂಘದ ದಿಗಂಬರ ದೇಸಾಯಿ, ರಾಜೇಶ ಗೌಡ , ಶಾಂತಾ ವೇಳಿಪ, ಬಾಳಸೋ ಕುಂಡಲಕರ, ಅನಂತ ದೇಸಾಯಿ, ಮಾಹಾದೇವ ಮಿರಾಶಿ, ದತ್ತಾ ದೇಸಾಯಿ, ರವಿ ಡಿಗ್ಗಿ ಹಾಜರಿದ್ದರು.<br /> <br /> ಬೇಡಿಕೆಗಳ ಬಗ್ಗೆ ಜೋಯಿಡಾ ತಹಶೀಲ್ದಾರ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಮನವಿ ನೀಡಲಾಗಿದ್ದು, ಪ್ರಮುಖ ಬೇಡಿಕೆಗಳು ಈಡೇರಿಸುವವರೆಗೂ ಹೋರಾಟ ಮುಂದುವರಿಸಲು ಸಂಘ ತಿರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>