<p><strong>ಕಾರವಾರ: </strong>ಜಿಲ್ಲೆಯ ಎಲ್ಲ ತಾಲ್ಲೂಕಿನ ಅಂಗವಿಕಲರಿಗೆ ವೈದ್ಯಕೀಯ ಶಿಬಿರ ಹಮ್ಮಿಕೊಳ್ಳುವುದರೊಂದಿಗೆ ಗುರುತಿನ ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.<br /> <br /> ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಬುಧವಾರ ಜರುಗಿದ ರಾಷ್ಟ್ರೀಯ ದತ್ತಿ ಕಾಯ್ದೆಯಡಿ ವಿವಿಧ ಅಂಗವಿಕಲರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗವಿಕಲರ ಅಭಿವೃದ್ಧಿಗೆ ಸರಕಾರ ನೀಡುತ್ತಿರುವ ಸಹಾಯ ಸೌಲಭ್ಯ ಗಳನ್ನು ಜಿಲ್ಲೆಯ ಎಲ್ಲ ಅಂಗವಿಕಲರಿಗೂ ತಲುಪಿಸಬೇಕು ಎಂದರು.<br /> <br /> ಜಿಲ್ಲೆಯಲ್ಲಿ ಒಟ್ಟು 16997 ಅಂಗವಿಕಲರಿದ್ದು 1800 ಬುದ್ಧಿಮಾಂದ್ಯ ಅಥವಾ ಮಾನಸಿಕ ಅಸ್ವಸ್ಥರಿದ್ದಾರೆ. 1,143 ಅಂಧರು, 1968 ಶ್ರವಣದೋಷವುಳ್ಳವರು, 131 ಮಾನಸಿಕ ಅಸ್ವಸ್ಥರು, 9837 ದೈಹಿಕ ಅಂಗವಿಕಲರು ಹಾಗೂ 29 ಕುಷ್ಠರೋಗ ನಿವಾರಕ ಅಂಗವಿಕಲರಿದ್ದಾರೆ. <br /> <br /> ಇಲ್ಲಿಯವರೆಗೆ ಒಟ್ಟು 9978 ಅಂಗವಿಕಲರಿಗೆ ಗುರುತಿನ ಚೀಟಿ ನೀಡಲಾಗಿದ್ದು, 1,381 ಜನರಿಗೆ ವಿವಿಧ ಸಾಧನ ಸಲಕರಣೆ ನೀಡಲಾಗಿದ್ದು, 11866 ಜನರಿಗೆ ಮಾಸಾಶನ ನೀಡಿದೆ. 1,216 ಜನರಿಗೆ ವಿದ್ಯಾರ್ಥಿ ವೇತನ ಹಾಗೂ 3,364 ಜನರಿಗೆ ಬಸ್ಪಾಸ್ ವಿತರಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.<br /> <br /> ಪ್ರತಿ ಗ್ರಾಮ ಪಂಚಾಯಿತಿ ವಿವಿಧ ಯೋಜನೆಗಳಡಿ ಶೇ 5ರಷ್ಟು ಮೀಸಲಾತಿಯನ್ನು ಅಂಗವಿಕಲರಿಗೆ ಮೀಸಲಿಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿಜಯ ಮೋಹನರಾಜ್ ತಿಳಿಸಿದರು. <br /> <br /> ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕಿ ಸಿ.ಎನ್. ಹೊಳೆಹೊಸೂರ, ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕ ಚಂದಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ರಾಯಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಜಿಲ್ಲೆಯ ಎಲ್ಲ ತಾಲ್ಲೂಕಿನ ಅಂಗವಿಕಲರಿಗೆ ವೈದ್ಯಕೀಯ ಶಿಬಿರ ಹಮ್ಮಿಕೊಳ್ಳುವುದರೊಂದಿಗೆ ಗುರುತಿನ ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.<br /> <br /> ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಬುಧವಾರ ಜರುಗಿದ ರಾಷ್ಟ್ರೀಯ ದತ್ತಿ ಕಾಯ್ದೆಯಡಿ ವಿವಿಧ ಅಂಗವಿಕಲರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗವಿಕಲರ ಅಭಿವೃದ್ಧಿಗೆ ಸರಕಾರ ನೀಡುತ್ತಿರುವ ಸಹಾಯ ಸೌಲಭ್ಯ ಗಳನ್ನು ಜಿಲ್ಲೆಯ ಎಲ್ಲ ಅಂಗವಿಕಲರಿಗೂ ತಲುಪಿಸಬೇಕು ಎಂದರು.<br /> <br /> ಜಿಲ್ಲೆಯಲ್ಲಿ ಒಟ್ಟು 16997 ಅಂಗವಿಕಲರಿದ್ದು 1800 ಬುದ್ಧಿಮಾಂದ್ಯ ಅಥವಾ ಮಾನಸಿಕ ಅಸ್ವಸ್ಥರಿದ್ದಾರೆ. 1,143 ಅಂಧರು, 1968 ಶ್ರವಣದೋಷವುಳ್ಳವರು, 131 ಮಾನಸಿಕ ಅಸ್ವಸ್ಥರು, 9837 ದೈಹಿಕ ಅಂಗವಿಕಲರು ಹಾಗೂ 29 ಕುಷ್ಠರೋಗ ನಿವಾರಕ ಅಂಗವಿಕಲರಿದ್ದಾರೆ. <br /> <br /> ಇಲ್ಲಿಯವರೆಗೆ ಒಟ್ಟು 9978 ಅಂಗವಿಕಲರಿಗೆ ಗುರುತಿನ ಚೀಟಿ ನೀಡಲಾಗಿದ್ದು, 1,381 ಜನರಿಗೆ ವಿವಿಧ ಸಾಧನ ಸಲಕರಣೆ ನೀಡಲಾಗಿದ್ದು, 11866 ಜನರಿಗೆ ಮಾಸಾಶನ ನೀಡಿದೆ. 1,216 ಜನರಿಗೆ ವಿದ್ಯಾರ್ಥಿ ವೇತನ ಹಾಗೂ 3,364 ಜನರಿಗೆ ಬಸ್ಪಾಸ್ ವಿತರಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.<br /> <br /> ಪ್ರತಿ ಗ್ರಾಮ ಪಂಚಾಯಿತಿ ವಿವಿಧ ಯೋಜನೆಗಳಡಿ ಶೇ 5ರಷ್ಟು ಮೀಸಲಾತಿಯನ್ನು ಅಂಗವಿಕಲರಿಗೆ ಮೀಸಲಿಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿಜಯ ಮೋಹನರಾಜ್ ತಿಳಿಸಿದರು. <br /> <br /> ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕಿ ಸಿ.ಎನ್. ಹೊಳೆಹೊಸೂರ, ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕ ಚಂದಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ರಾಯಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>