‘ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಸೇರಿ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂದೇ ದಿನ ರಾಹುಲ್ ಗಾಂಧಿ ರೋಡ್ ಷೋ ಇದೆ. ಇಲ್ಲಿಯ ಬ್ಯಾರಿಕೇಡ್ಗಳನ್ನು ಬೇರೆ ಬೇರೆ ಕಡೆಗೆ ಒಯ್ದಿದ್ದಾರೆ. ಮೆರವಣಿಗೆ ಸಾಗುವ ಹೆದ್ದಾರಿಯ ಅಕ್ಕಪಕ್ಕದಲ್ಲಿ ಕಡ್ಡಾಯವಾಗಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಭದ್ರತಾ ಅಧಿಕಾರಿಗಳು ಸೂಚಿಸಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಇತರ ನಾಯಕರು ಬೇರೆಯದೇ ರೀತಿ ಸೂಚನೆ ನೀಡಿದ್ದಾರೆ’ ಎನ್ನುತ್ತಾರೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು.