<p><strong>ಕಾರವಾರ:</strong> ಉತ್ತರ ಕನ್ನಡ ಜಿಲ್ಲೆಯನ್ನು ದಲಿತ ದೌರ್ಜನ್ಯ ಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳು ಇದೇ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ದಲಿತಪರ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಚಂದ್ರಕಾಂತ ಕಾದ್ರೋಳ್ಳಿ ತಿಳಿಸಿದರು.<br /> <br /> ನಗರದ ಪ್ರವಾಸಿಗೃಹದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ದಲಿತರ ಸಮಸ್ಯೆಗಳ ಬಗ್ಗೆ ಇನ್ನೂ ಯಾವುದೇ ರೀತಿ ಅಧ್ಯಯನ ಮಾಡಿಲ್ಲ. ಅಧಿಕಾರಿಗಳು ಒಂದಿಲ್ಲೊಂದು ರೀತಿಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ' ಎಂದರು.<br /> <br /> `ಜಿಲ್ಲಾಧಿಕಾರಿಗಳು ಕೂಡಲೇ ದಲಿತರನ್ನು ಕರೆದು ಅವರ ಸ್ಥಿತಿಗತಿಗಳ ಬಗ್ಗೆ ವಿಚಾರಿಸದಿದ್ದರೆ ಅವರನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದ ಎದುರು ಆಮರಣಾಂತ ಉಪಾಸ ಸತ್ಯಾಗ್ರಹ ಮಾಡಲಾಗುವುದು' ಎಂದು ಅವರು ಎಚ್ಚರಿಕೆ ನೀಡಿದರು.<br /> <br /> `ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ದಾಖಲಿಸದೆ ಇರುವ ಬಗ್ಗೆ ಗೃಹ ಇಲಾಖೆಗೆ ದೂರು ನೀಡಲಾಗುವುದು' ಎಂದ ಅವರು, `ಜಿಲ್ಲಾ ಉಸ್ತುವಾರಿ ಸಚಿವರು ಕನಿಷ್ಟಪಕ್ಷ ಮೂರು ತಿಂಗಳಿಗೊಮ್ಮೆ ದಲಿತರ ಸ್ಥಿತಿಗತಿ ಅರಿಯಲು ಇಲ್ಲಾ ಇಲಾಖೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಚರ್ಚೆ ನಡೆಸಬೇಕು' ಎಂದರು.<br /> <br /> `ಅಕ್ರಮ ಸಕ್ರಮ ಯೋಜನೆಯಡಿ ದಲಿತರಿಗೆ ಮನೆ ಮತ್ತು ಕೃಷಿ ಜಮೀನುಗಳನ್ನು ಅರಣ್ಯ ಇಲಾಖೆ ಮೇರೆಗೆ ಪ್ರಕರಣ ಇತ್ಯರ್ಥಗೋಳಿಸಿ ಕೊಡಬೇಕು' ಎಂದು ಆಗ್ರಹಿಸಿದರು.<br /> <br /> `ಜಿಲ್ಲೆಯಲ್ಲಿ ಖಾಲಿಯಿರುವ ಬ್ಯಾಕ್ಲಾಗ್ ಹುದ್ದೆಗೆ ತಕ್ಷಣ ನೇಮಕ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕು. ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಡಾ. ವಿ.ಎಸ್.ಸೋಂದೆ ವರದಿಯನ್ನು ಅನುಷ್ಠಾನಕ್ಕೆ ತರಬೇಕು' ಎಂದು ಕಾದ್ರೋಳ್ಳಿ ಒತ್ತಾಯಿಸಿದರು.<br /> <br /> ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ರಾಜೇಶ ದೇಶಭಾಗ, ದಲಿತಪರ ಸಂಘಟನೆಗಳ ಜಿಲ್ಲಾ ಘಟಕದ ಅಧ್ಯಕ್ಷ ದ್ಯಾಮಣ್ಣ ಬೋವಿವಡ್ಡರ, ಉದಯ ಜೊಗಳೇಕರ, ಪಿ.ಟಿ.ಮರಾಠೆ, ಚಂದ್ರಕಾಂತ ರೇವಣಕರ, ಗಣೇಶ ಪಾಠಣಕರ, ದೇವಪ್ಪ ಕಾಸ್ಮಾಡಿ, ಎಚ್.ವೈ. ಭಜಂತ್ರಿ, ಬಸವರಾಜ ದೊಡ್ಮನಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಉತ್ತರ ಕನ್ನಡ ಜಿಲ್ಲೆಯನ್ನು ದಲಿತ ದೌರ್ಜನ್ಯ ಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳು ಇದೇ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ದಲಿತಪರ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಚಂದ್ರಕಾಂತ ಕಾದ್ರೋಳ್ಳಿ ತಿಳಿಸಿದರು.<br /> <br /> ನಗರದ ಪ್ರವಾಸಿಗೃಹದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ದಲಿತರ ಸಮಸ್ಯೆಗಳ ಬಗ್ಗೆ ಇನ್ನೂ ಯಾವುದೇ ರೀತಿ ಅಧ್ಯಯನ ಮಾಡಿಲ್ಲ. ಅಧಿಕಾರಿಗಳು ಒಂದಿಲ್ಲೊಂದು ರೀತಿಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ' ಎಂದರು.<br /> <br /> `ಜಿಲ್ಲಾಧಿಕಾರಿಗಳು ಕೂಡಲೇ ದಲಿತರನ್ನು ಕರೆದು ಅವರ ಸ್ಥಿತಿಗತಿಗಳ ಬಗ್ಗೆ ವಿಚಾರಿಸದಿದ್ದರೆ ಅವರನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದ ಎದುರು ಆಮರಣಾಂತ ಉಪಾಸ ಸತ್ಯಾಗ್ರಹ ಮಾಡಲಾಗುವುದು' ಎಂದು ಅವರು ಎಚ್ಚರಿಕೆ ನೀಡಿದರು.<br /> <br /> `ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ದಾಖಲಿಸದೆ ಇರುವ ಬಗ್ಗೆ ಗೃಹ ಇಲಾಖೆಗೆ ದೂರು ನೀಡಲಾಗುವುದು' ಎಂದ ಅವರು, `ಜಿಲ್ಲಾ ಉಸ್ತುವಾರಿ ಸಚಿವರು ಕನಿಷ್ಟಪಕ್ಷ ಮೂರು ತಿಂಗಳಿಗೊಮ್ಮೆ ದಲಿತರ ಸ್ಥಿತಿಗತಿ ಅರಿಯಲು ಇಲ್ಲಾ ಇಲಾಖೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಚರ್ಚೆ ನಡೆಸಬೇಕು' ಎಂದರು.<br /> <br /> `ಅಕ್ರಮ ಸಕ್ರಮ ಯೋಜನೆಯಡಿ ದಲಿತರಿಗೆ ಮನೆ ಮತ್ತು ಕೃಷಿ ಜಮೀನುಗಳನ್ನು ಅರಣ್ಯ ಇಲಾಖೆ ಮೇರೆಗೆ ಪ್ರಕರಣ ಇತ್ಯರ್ಥಗೋಳಿಸಿ ಕೊಡಬೇಕು' ಎಂದು ಆಗ್ರಹಿಸಿದರು.<br /> <br /> `ಜಿಲ್ಲೆಯಲ್ಲಿ ಖಾಲಿಯಿರುವ ಬ್ಯಾಕ್ಲಾಗ್ ಹುದ್ದೆಗೆ ತಕ್ಷಣ ನೇಮಕ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕು. ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಡಾ. ವಿ.ಎಸ್.ಸೋಂದೆ ವರದಿಯನ್ನು ಅನುಷ್ಠಾನಕ್ಕೆ ತರಬೇಕು' ಎಂದು ಕಾದ್ರೋಳ್ಳಿ ಒತ್ತಾಯಿಸಿದರು.<br /> <br /> ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ರಾಜೇಶ ದೇಶಭಾಗ, ದಲಿತಪರ ಸಂಘಟನೆಗಳ ಜಿಲ್ಲಾ ಘಟಕದ ಅಧ್ಯಕ್ಷ ದ್ಯಾಮಣ್ಣ ಬೋವಿವಡ್ಡರ, ಉದಯ ಜೊಗಳೇಕರ, ಪಿ.ಟಿ.ಮರಾಠೆ, ಚಂದ್ರಕಾಂತ ರೇವಣಕರ, ಗಣೇಶ ಪಾಠಣಕರ, ದೇವಪ್ಪ ಕಾಸ್ಮಾಡಿ, ಎಚ್.ವೈ. ಭಜಂತ್ರಿ, ಬಸವರಾಜ ದೊಡ್ಮನಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>