ಶಿರಸಿ: ಹಿರಿಯ ಸಾಹಿತಿ ಬಿ.ಎಚ್.ಶ್ರೀಧರರ ಸ್ಮರಣೆಯಲ್ಲಿ ನೀಡುವ ಪ್ರತಿಷ್ಠಿತ ಬಿ.ಎಚ್. ಶ್ರೀಧರ ಸಾಹಿತ್ಯ ಪ್ರಶಸ್ತಿಯನ್ನು ವಿಜ್ಞಾನ ಬರಹಗಾರ ನಾಗೇಶ ಹೆಗಡೆ ಅವರಿಗೆ ಸೋಮವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಾಗೇಶ ಹೆಗಡೆ ಅವರು ‘ಕನ್ನಡದ ಸೊಗಡನ್ನು ಅರ್ಥೈಸಿಕೊಳ್ಳುವ ಜತೆಗೆ ಭಾಷೆಯನ್ನು ದುಡಿಸಿಕೊಂಡು ಆ ಮೂಲಕ ವಿಜ್ಞಾನ, ತಂತ್ರಜ್ಞಾನ, ಪರಿಸರದ ಜ್ಞಾನವನ್ನು ಜನರಿಗೆ ಕೊಡಬೇಕು ಎಂಬ ಮಹತ್ವಾಕಾಂಕ್ಷೆಯಿಂದ ವಿಜ್ಞಾನ ಬರಹವನ್ನು ರೂಢಿಸಿಕೊಂಡೆ ಎಂದು ಅವರು ತಿಳಿಸಿದರು.