ಶಿರಸಿ ವಿಧಾನಸಭಾ ಕ್ಷೇತ್ರದ ವಿವಿಧ ಘಟಕದ ಬೂತ್, ಹೋಬಳಿ ಹಾಗೂ ತಾಲ್ಲುಕು ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆರ್.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ವಕೀಲ ಯೋಗೇಂದ್ರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತ್ರಿವೇಣಿ ಗೌಡ, ಶಿರಸಿ ಗ್ರಾಮೀಣ ಘಟಕದ ಅಧ್ಯಕ್ಷ ಆರ್.ಜಿ.ನಾಯ್ಕ, ನಗರ ಘಟಕದ ಅಧ್ಯಕ್ಷ ಜುಬೇರ ಜುಕಾಕೋ, ನಗರ ಪ್ರಧಾನ ಕಾರ್ಯದರ್ಶಿ ಶೇಖರ ಪೂಜಾರಿ, ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಪ್ರಮುಖರಾದ ಆನಂದ ಗೌಡ, ರಾಜೇಶ್ವರಿ ಹೆಗಡೆ ಪಾಲ್ಗೊಂಡಿದ್ದರು.