<p><strong>ಮುಂಡಗೋಡ: </strong>ಪತ್ರಕರ್ತರು ವರದಿ ಮಾಡುವ ಶೈಲಿಯನ್ನು ಉತ್ತಮವಾಗಿ ರೂಢಿಸಿಕೊಂಡರೆ ಮಾತ್ರ ಓದುಗರ ಮನ ತಟ್ಟಲು ಸಾಧ್ಯವಾಗುತ್ತದೆ ಎಂದು ಶಾಸಕ ವಿ.ಎಸ್.ಪಾಟೀಲ ಹೇಳಿದರು.<br /> <br /> ಅವರು ಬುಧವಾರ ಇಲ್ಲಿಯ ತಾ.ಪಂ. ಸಭಾಭವನದಲ್ಲಿ ತಾಲ್ಲೂಕು ಪತ್ರಕರ್ತರ ಒಕ್ಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜ ತಿದ್ದುವ ಜವಾಬ್ದಾರಿ ಪತ್ರಿಕೆಗಳ ಮೇಲಿದ್ದು ಒಳ್ಳೆಯದನ್ನು ಹೆಚ್ಚು ಬಿಂಬಿಸುವ ಕೆಲಸ ಮಾಡಬೇಕಾಗಿದೆ. ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಮಾಧ್ಯಮಗಳ ಪಾತ್ರ ಮುಖ್ಯವಾಗಿದೆ ಎಂದರು.<br /> <br /> ಉದ್ಯಮಿ ಶಿವರಾಮ ಹೆಬ್ಬಾರ, ಮಾಧ್ಯಮಗಳು ವಿಶ್ಲೇಷಣೆ ಹಾಗೂ ಹೊಸತನ್ನು ಹುಡುಕುವದರತ್ತ ಹೆಚ್ಚಿನ ಗಮನ ನೀಡಬೇಕು. ವ್ಯಕ್ತಿಗತ ಟೀಕೆಗೆ ಹೆಚ್ಚಿನ ಒತ್ತು ನೀಡದೇ ಸಮಾಜದಲ್ಲಿ ತಮಗಿರುವ ಮೌಲ್ಯವನ್ನು ಹೆಚ್ಚಿಸಿಕೊಳ್ಳುವದರತ್ತ ಪ್ರಯತ್ನಿಸಬೇಕು. ಪತ್ರಿಕೆಗಳಿಂದ ಹೆದರಿಸುವ ಕೆಲಸ ನಡೆಯಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಉದ್ಯಮಿ ಡಿ.ಅನಿಲಕುಮಾರ, ಜನರ ಮೇಲೆ ವ್ಯಾಪಕ ಪರಿಣಾಮ ಬೀರುವ ಶಕ್ತಿ ಮಾಧ್ಯಮ ಕ್ಷೇತ್ರಕ್ಕಿದೆ. ಸತ್ಯಾಂಶವನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಜನರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯ ಎಂದರು.<br /> <br /> ಜೆ.ಡಿ.ಎಸ್. ಮುಖಂಡ ಬಸವರಾಜ ಓಶೀಮಠ ಮಾತನಾಡಿದರು. ಶಹನಾಯಿ ವಾದಕ ಫಕ್ಕೀರಪ್ಪ ಭಜಂತ್ರಿ ಹಾಗೂ ವೈದ್ಯಾಧಿಕಾರಿ ಡಾ.ಲಕ್ಷ್ಮೀದೇವಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.<br /> <br /> ಪ.ಪಂ. ಅಧ್ಯಕ್ಷ ಎಂ.ಕೆ. ಗಡವಾಲೆ, ತಾ.ಪಂ. ಅಧ್ಯಕ್ಷೆ ಲಕ್ಷ್ಮೀಬಾಯಿ ಕೊರವರ, ಉಪಾಧ್ಯಕ್ಷೆ ಲಕ್ಷ್ಮವ್ವ ಶೇಟ್, ರೋಟರಿ ಕ್ಲಬ್ ಅಧ್ಯಕ್ಷ ಸಂಗಮೇಶ ಬಿದರಿ, ತಹಸೀಲ್ದಾರ ಎಂ.ವಿ. ಕಲ್ಲೂರಮಠ, ಶ್ರೀಧರ ಡೋರಿ, ಒಕ್ಕೂಟದ ಅಧ್ಯಕ್ಷ ಜಗದೀಶ ದೈವಜ್ಞ ಇತರರು ಉಪಸ್ಥಿತರಿದ್ದರು. <br /> <br /> ಶಾಸಕರ ಮಾದರಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನಾಗೀತೆ ಹಾಡಿದರು. ನಾಗರಾಜ ಬಾರ್ಕಿ ಸ್ವಾಗತಿಸಿದರು. ನಾಗರಾಜ ನಾಯ್ಕ ನಿರೂಪಿಸಿದರು. ಸಂತೋಷ ದೈವಜ್ಞ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ: </strong>ಪತ್ರಕರ್ತರು ವರದಿ ಮಾಡುವ ಶೈಲಿಯನ್ನು ಉತ್ತಮವಾಗಿ ರೂಢಿಸಿಕೊಂಡರೆ ಮಾತ್ರ ಓದುಗರ ಮನ ತಟ್ಟಲು ಸಾಧ್ಯವಾಗುತ್ತದೆ ಎಂದು ಶಾಸಕ ವಿ.ಎಸ್.ಪಾಟೀಲ ಹೇಳಿದರು.<br /> <br /> ಅವರು ಬುಧವಾರ ಇಲ್ಲಿಯ ತಾ.ಪಂ. ಸಭಾಭವನದಲ್ಲಿ ತಾಲ್ಲೂಕು ಪತ್ರಕರ್ತರ ಒಕ್ಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜ ತಿದ್ದುವ ಜವಾಬ್ದಾರಿ ಪತ್ರಿಕೆಗಳ ಮೇಲಿದ್ದು ಒಳ್ಳೆಯದನ್ನು ಹೆಚ್ಚು ಬಿಂಬಿಸುವ ಕೆಲಸ ಮಾಡಬೇಕಾಗಿದೆ. ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಮಾಧ್ಯಮಗಳ ಪಾತ್ರ ಮುಖ್ಯವಾಗಿದೆ ಎಂದರು.<br /> <br /> ಉದ್ಯಮಿ ಶಿವರಾಮ ಹೆಬ್ಬಾರ, ಮಾಧ್ಯಮಗಳು ವಿಶ್ಲೇಷಣೆ ಹಾಗೂ ಹೊಸತನ್ನು ಹುಡುಕುವದರತ್ತ ಹೆಚ್ಚಿನ ಗಮನ ನೀಡಬೇಕು. ವ್ಯಕ್ತಿಗತ ಟೀಕೆಗೆ ಹೆಚ್ಚಿನ ಒತ್ತು ನೀಡದೇ ಸಮಾಜದಲ್ಲಿ ತಮಗಿರುವ ಮೌಲ್ಯವನ್ನು ಹೆಚ್ಚಿಸಿಕೊಳ್ಳುವದರತ್ತ ಪ್ರಯತ್ನಿಸಬೇಕು. ಪತ್ರಿಕೆಗಳಿಂದ ಹೆದರಿಸುವ ಕೆಲಸ ನಡೆಯಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಉದ್ಯಮಿ ಡಿ.ಅನಿಲಕುಮಾರ, ಜನರ ಮೇಲೆ ವ್ಯಾಪಕ ಪರಿಣಾಮ ಬೀರುವ ಶಕ್ತಿ ಮಾಧ್ಯಮ ಕ್ಷೇತ್ರಕ್ಕಿದೆ. ಸತ್ಯಾಂಶವನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಜನರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯ ಎಂದರು.<br /> <br /> ಜೆ.ಡಿ.ಎಸ್. ಮುಖಂಡ ಬಸವರಾಜ ಓಶೀಮಠ ಮಾತನಾಡಿದರು. ಶಹನಾಯಿ ವಾದಕ ಫಕ್ಕೀರಪ್ಪ ಭಜಂತ್ರಿ ಹಾಗೂ ವೈದ್ಯಾಧಿಕಾರಿ ಡಾ.ಲಕ್ಷ್ಮೀದೇವಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.<br /> <br /> ಪ.ಪಂ. ಅಧ್ಯಕ್ಷ ಎಂ.ಕೆ. ಗಡವಾಲೆ, ತಾ.ಪಂ. ಅಧ್ಯಕ್ಷೆ ಲಕ್ಷ್ಮೀಬಾಯಿ ಕೊರವರ, ಉಪಾಧ್ಯಕ್ಷೆ ಲಕ್ಷ್ಮವ್ವ ಶೇಟ್, ರೋಟರಿ ಕ್ಲಬ್ ಅಧ್ಯಕ್ಷ ಸಂಗಮೇಶ ಬಿದರಿ, ತಹಸೀಲ್ದಾರ ಎಂ.ವಿ. ಕಲ್ಲೂರಮಠ, ಶ್ರೀಧರ ಡೋರಿ, ಒಕ್ಕೂಟದ ಅಧ್ಯಕ್ಷ ಜಗದೀಶ ದೈವಜ್ಞ ಇತರರು ಉಪಸ್ಥಿತರಿದ್ದರು. <br /> <br /> ಶಾಸಕರ ಮಾದರಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನಾಗೀತೆ ಹಾಡಿದರು. ನಾಗರಾಜ ಬಾರ್ಕಿ ಸ್ವಾಗತಿಸಿದರು. ನಾಗರಾಜ ನಾಯ್ಕ ನಿರೂಪಿಸಿದರು. ಸಂತೋಷ ದೈವಜ್ಞ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>