ಕಾಂಗ್ರೆಸ್ ಮುಖಂಡ ಪ್ರೇಮಾನಂದ ನಾಯ್ಕ ಮಾತನಾಡಿ,‘ಕ್ರಿಯಾಶೀಲ ಶಾಸಕರಿದ್ದರೆ ಅಭಿವೃದ್ಧಿ ಕಾರ್ಯ ನಡೆಸಬಹುದು ಎಂಬುದಕ್ಕೆ ಶಿವರಾಮ ಹೆಬ್ಬಾರ ಉದಾಹರಣೆಯಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ಮೂಲ ಸೌಕರ್ಯಗಳ ಕೊರತೆ ಇದ್ದು, ಬರುವ ದಿನಗಳಲ್ಲಿ ಅವರು ಅದಕ್ಕೆ ಪರಿಹಾರ ಒದಗಿಸುವ ಭರವಸೆಯಿದೆ’ ಎಂದರು. ಇದೇ ಸಂದರ್ಭದಲ್ಲಿ ಶಾಸಕರು, ₹ 9 ಲಕ್ಷ ವೆಚ್ಚದ ಸೇತುವೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಅರಬೈಲ್ ಮಾರುತಿ ದೇವಸ್ಥಾನ ಆವರಣದಲ್ಲಿ ₹ 4 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಹಾಗೂ ₹ 30 ಲಕ್ಷ ವೆಚ್ಚದ ದಬ್ಗುಳಿ ರಸ್ತೆಗೆ ಗುದ್ದಲಿ ಪೂಜೆ, ಅರಬೈಲ್ ಹೆದ್ದಾರಿ ಪಕ್ಕ ₹ 3.5 ಲಕ್ಷ ವೆಚ್ಚದ ಹೈಟೆಕ್ ಬಸ್ ತಂಗುದಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.