<p><strong>ಮುಂಡಗೋಡ:</strong> `ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಬಿಜೆಪಿಯಲ್ಲಿಯೇ ಇರುತ್ತೇನೆ. ಗೋವಾದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ~ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ವಿ.ಎಸ್.ಪಾಟೀಲ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ನಾನು ಗೋವಾಕ್ಕೆ ಹೋಗಿದ್ದು ರಾಜಕೀಯ ಚರ್ಚೆ ನಡೆಸಲು ಅಲ್ಲ. ಕಳೆದ ಹಲವು ದಿನಗಳಿಂದ ಸಚಿವ ಆನಂದ ಅಸ್ನೋಟಿಕರ ಅವರನ್ನು ಭೇಟಿಯಾಗಿಲ್ಲ. ನಾನು ಅಸ್ನೋಟಿಕರ ಜೊತೆಗೂಡಿ ಕಾಂಗ್ರೆಸ್ ಸೇರುತ್ತಿದ್ದೇವೆ ಎನ್ನುವುದು ಸುಳ್ಳು. ನಾನು ಬಿಜೆಪಿಯಲ್ಲಿಯೇ ಉಳಿಯುತ್ತೇನೆ. ಕೆಜೆಪಿಗೂ ಹೋಗುವುದಿಲ್ಲ~ ಎಂದು ಸ್ಪಷ್ಟಪಡಿಸಿದರು.<br /> <br /> <strong>ಯಾರೂ ಪಕ್ಷ ಬಿಡುವುದಿಲ್ಲ: ಕಾಗೇರಿ</strong><br /> <br /> <strong>ಸಿದ್ದಾಪುರ: </strong>`ಶಿವಾನಂದ ನಾಯ್ಕ, ಶಶಿಭೂಷಣ ಹೆಗಡೆ ಸೇರಿದಂತೆ ಜಿಲ್ಲೆಯ ಯಾವುದೇ ಮುಖಂಡರೂ ಬಿಜೆಪಿ ಬಿಡುವುದಿಲ್ಲ. ಅವರೆಲ್ಲರ ಉಪಸ್ಥಿತಿಯಲ್ಲಿಯೇ ಚುನಾವಣೆ ನಡೆಸಲಿದ್ದೇವೆ~ ಎಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ತಾಲ್ಲೂಕಿನ ನೆಲೆಮಾಂವ್ನಲ್ಲಿ ಶುಕ್ರವಾರ ಕುಡಿಯುವ ನೀರು ಯೋಜನೆಯ ಉದ್ಘಾಟನೆಯ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರು ಈ ಬಗ್ಗೆ ಪ್ರಶ್ನೆ ಮಾಡಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. `ಈ ಎಲ್ಲರಿಗೂ ಪಕ್ಷವೇ ಸ್ಥಾನಮಾನ ನೀಡಿದೆ.ಆದ್ದರಿಂದ ಅವರುಗಳು ಪಕ್ಷ ತ್ಯಜಿಸಲಾರರು ಎಂಬ ವಿಶ್ವಾಸವಿದೆ. ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ:</strong> `ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಬಿಜೆಪಿಯಲ್ಲಿಯೇ ಇರುತ್ತೇನೆ. ಗೋವಾದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ~ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ವಿ.ಎಸ್.ಪಾಟೀಲ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ನಾನು ಗೋವಾಕ್ಕೆ ಹೋಗಿದ್ದು ರಾಜಕೀಯ ಚರ್ಚೆ ನಡೆಸಲು ಅಲ್ಲ. ಕಳೆದ ಹಲವು ದಿನಗಳಿಂದ ಸಚಿವ ಆನಂದ ಅಸ್ನೋಟಿಕರ ಅವರನ್ನು ಭೇಟಿಯಾಗಿಲ್ಲ. ನಾನು ಅಸ್ನೋಟಿಕರ ಜೊತೆಗೂಡಿ ಕಾಂಗ್ರೆಸ್ ಸೇರುತ್ತಿದ್ದೇವೆ ಎನ್ನುವುದು ಸುಳ್ಳು. ನಾನು ಬಿಜೆಪಿಯಲ್ಲಿಯೇ ಉಳಿಯುತ್ತೇನೆ. ಕೆಜೆಪಿಗೂ ಹೋಗುವುದಿಲ್ಲ~ ಎಂದು ಸ್ಪಷ್ಟಪಡಿಸಿದರು.<br /> <br /> <strong>ಯಾರೂ ಪಕ್ಷ ಬಿಡುವುದಿಲ್ಲ: ಕಾಗೇರಿ</strong><br /> <br /> <strong>ಸಿದ್ದಾಪುರ: </strong>`ಶಿವಾನಂದ ನಾಯ್ಕ, ಶಶಿಭೂಷಣ ಹೆಗಡೆ ಸೇರಿದಂತೆ ಜಿಲ್ಲೆಯ ಯಾವುದೇ ಮುಖಂಡರೂ ಬಿಜೆಪಿ ಬಿಡುವುದಿಲ್ಲ. ಅವರೆಲ್ಲರ ಉಪಸ್ಥಿತಿಯಲ್ಲಿಯೇ ಚುನಾವಣೆ ನಡೆಸಲಿದ್ದೇವೆ~ ಎಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ತಾಲ್ಲೂಕಿನ ನೆಲೆಮಾಂವ್ನಲ್ಲಿ ಶುಕ್ರವಾರ ಕುಡಿಯುವ ನೀರು ಯೋಜನೆಯ ಉದ್ಘಾಟನೆಯ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರು ಈ ಬಗ್ಗೆ ಪ್ರಶ್ನೆ ಮಾಡಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. `ಈ ಎಲ್ಲರಿಗೂ ಪಕ್ಷವೇ ಸ್ಥಾನಮಾನ ನೀಡಿದೆ.ಆದ್ದರಿಂದ ಅವರುಗಳು ಪಕ್ಷ ತ್ಯಜಿಸಲಾರರು ಎಂಬ ವಿಶ್ವಾಸವಿದೆ. ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>