<p><strong>ಶಿರಸಿ: </strong>`ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಬೇಕಾದ ಸಿಲಿಂಡರ್ಗಳ ಕೊರತೆ ಎದುರಾಗಿದ್ದು, ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ತಾಲ್ಲೂಕಿನ ಇಸಳೂರಿನ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, `ಕೇಂದ್ರ ಸರ್ಕಾರ ಸಿಲಿಂಡರ್ಗಳ ಮೇಲೆ ಮಿತಿ ಹೇರಿರುವ ಪರಿಣಾಮ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಬೇಕಾದ ಪ್ರಮಾಣದಲ್ಲಿ ಅಡುಗೆ ಸಿಲಿಂಡರ್ಗಳು ಸಿಗುತ್ತಿಲ್ಲ~ ಎಂದರು. <br /> <br /> `ಸಿಲಿಂಡರ್ ಮಿತಿ ಕುರಿತು ಹಿಂದೆ ಸಭೆ ನಡೆದ ಸಂದರ್ಭದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆ ಭರವಸೆಯನ್ನು ಸರ್ಕಾರ ಇಲ್ಲಿಯವರೆಗೆ ಈಡೇರಿಸಿಲ್ಲ~ ಎಂದರು. <br /> <br /> `ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಪ್ರೌಢಶಾಲೆಗಳಲ್ಲಿ ಅನುಷ್ಠಾನ ಆಗುತ್ತಿರುವುದರಿಂದ ಪ್ರೌಢಶಾಲೆಗಳಿಗೂ ಪ್ರಾಮುಖ್ಯತೆ ಬಂದಿದೆ. ರಾಜ್ಯದಲ್ಲಿ ಯೋಜನೆಯನ್ನು ಉತ್ತಮ ರೀತಿ ಅನುಷ್ಠಾನ ಮಾಡಲಾಗುತ್ತಿದೆ. 8ನೇ ತರಗತಿ ಅಥವಾ 14ನೇ ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ~ ಎಂದರು.<br /> <br /> `ಈ ಯೋಜನೆಯನ್ನು 10ನೇ ತರಗತಿ ಅಥವಾ 16ನೇ ವರ್ಷದವರೆಗೆ ಹೆಚ್ಚಿಸಲು ಕೇಂದ್ರದ ಮುಂದೆ ಬೇಡಿಕೆ ಸಲ್ಲಿಸಿದ್ದೇವೆ. ನೂತನ ಶಿಕ್ಷಣ ಮಂತ್ರಿಗಳು ಈ ಬಗ್ಗೆ ಗಮನ ನೀಡುತ್ತಾರೆ ಎನ್ನುವ ಭರವಸೆ ಇದೆ~ ಎಂದ ಸಚಿವರು, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಯೋಜನೆಗೆ ಕೇಂದ್ರ ಸರ್ಕಾರ ನೀಡುವ ಸಹಾಯಧನ ಈವರೆಗೆ ಸಂದಾಯವಾಗಿಲ್ಲ. ಈ ವಿಷಯವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>`ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಬೇಕಾದ ಸಿಲಿಂಡರ್ಗಳ ಕೊರತೆ ಎದುರಾಗಿದ್ದು, ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ತಾಲ್ಲೂಕಿನ ಇಸಳೂರಿನ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, `ಕೇಂದ್ರ ಸರ್ಕಾರ ಸಿಲಿಂಡರ್ಗಳ ಮೇಲೆ ಮಿತಿ ಹೇರಿರುವ ಪರಿಣಾಮ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಬೇಕಾದ ಪ್ರಮಾಣದಲ್ಲಿ ಅಡುಗೆ ಸಿಲಿಂಡರ್ಗಳು ಸಿಗುತ್ತಿಲ್ಲ~ ಎಂದರು. <br /> <br /> `ಸಿಲಿಂಡರ್ ಮಿತಿ ಕುರಿತು ಹಿಂದೆ ಸಭೆ ನಡೆದ ಸಂದರ್ಭದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆ ಭರವಸೆಯನ್ನು ಸರ್ಕಾರ ಇಲ್ಲಿಯವರೆಗೆ ಈಡೇರಿಸಿಲ್ಲ~ ಎಂದರು. <br /> <br /> `ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಪ್ರೌಢಶಾಲೆಗಳಲ್ಲಿ ಅನುಷ್ಠಾನ ಆಗುತ್ತಿರುವುದರಿಂದ ಪ್ರೌಢಶಾಲೆಗಳಿಗೂ ಪ್ರಾಮುಖ್ಯತೆ ಬಂದಿದೆ. ರಾಜ್ಯದಲ್ಲಿ ಯೋಜನೆಯನ್ನು ಉತ್ತಮ ರೀತಿ ಅನುಷ್ಠಾನ ಮಾಡಲಾಗುತ್ತಿದೆ. 8ನೇ ತರಗತಿ ಅಥವಾ 14ನೇ ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ~ ಎಂದರು.<br /> <br /> `ಈ ಯೋಜನೆಯನ್ನು 10ನೇ ತರಗತಿ ಅಥವಾ 16ನೇ ವರ್ಷದವರೆಗೆ ಹೆಚ್ಚಿಸಲು ಕೇಂದ್ರದ ಮುಂದೆ ಬೇಡಿಕೆ ಸಲ್ಲಿಸಿದ್ದೇವೆ. ನೂತನ ಶಿಕ್ಷಣ ಮಂತ್ರಿಗಳು ಈ ಬಗ್ಗೆ ಗಮನ ನೀಡುತ್ತಾರೆ ಎನ್ನುವ ಭರವಸೆ ಇದೆ~ ಎಂದ ಸಚಿವರು, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಯೋಜನೆಗೆ ಕೇಂದ್ರ ಸರ್ಕಾರ ನೀಡುವ ಸಹಾಯಧನ ಈವರೆಗೆ ಸಂದಾಯವಾಗಿಲ್ಲ. ಈ ವಿಷಯವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>