‘ಬೈಪಾಸ್ಗೆ ಗೊತ್ತುಪಡಿಸಿರುವ ಭೂಮಿಯು ಭಾಗಶಃ ಅರಣ್ಯ ಪ್ರದೇಶ ವ್ಯಾಪ್ತಿಗೆ ಒಳಪಟ್ಟಿದೆ. ಇಲ್ಲಿನ ಭೂ ಸ್ವಾಧೀನಕ್ಕೆ ಅರಣ್ಯ ಇಲಾಖೆ ಅನುಮತಿ ಅಗತ್ಯವಾಗಿದ್ದು, ಈ ಪ್ರಕ್ರಿಯೆ ತುಂಬಾ ಸಮಯ ಹಿಡಿಯುತ್ತದೆ. ಅಲ್ಲದೇ ಈ ಭಾಗದ ಕೆಲ ಖಾಸಗಿ ಭೂಮಿ ಮಾಲೀಕರು ಬೈಪಾಸ್ಗೆ ವಿರೋಧ ವ್ಯಕ್ತಪಡಿಸಿದ್ದು, ಸರ್ವೇ ಕಾರ್ಯಕ್ಕೂ ಅಡ್ಡಗಾಲು ಹಾಕಿದ್ದಾರೆ’ ಎಂದು ಎನ್ಎಚ್ಎಐಯು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.