<p><strong>ಕಾರವಾರ:</strong> ಕರ್ನಾಟಕ ವಿದ್ಯುತ್ ನಿಗಮದ ನೌಕರರು ತಾಲ್ಲೂಕಿನ ಕದ್ರಾದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಹಮ್ಮಿಕೊಂಡ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.<br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ಕೆಪಿಸಿ ನೌಕರರ ಸಂಘದ ಕಾರ್ಯದರ್ಶಿ ಮಹೇಶ ಕುಡ್ತಲಕರ್ಮಾತನಾಡಿ, `ರಿಮೂಟ್ ಏರಿಯಾ ಭತ್ಯೆ ಮಿತಿ ಹೆಚ್ಚಳ, ತುಟ್ಟಿಭತ್ಯೆ ವಿಲೀನ, ಒಪ್ಪಂದದ ಅವಧಿಯನ್ನು ಏಳು ವರ್ಷದಿಂದ ಐದು ವರ್ಷಕ್ಕೆ ಇಳಿಸಬೇಕು ಎನ್ನುವ ಪ್ರಮುಖ ಬೇಡಿಕೆಗಳು ಆಡಳಿತ ಮಂಡಳಿ ಮುಂದಿಟ್ಟಿದ್ದು ಈ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಯುತ್ತದೆ~ ಎಂದರು.<br /> <br /> `ಬೇಡಿಕೆ ಈಡೇರಿಸುವುದಕ್ಕೆ ಸಂಬಂಧಿಸಿದಂತೆ ಜೂನ್ 21ರಂದು ಇಂಧನ ಸಚಿವರು ಮಾತುಕತೆ ಆಹ್ವಾನಿಸಿದ್ದಾರೆ. ಈ ಸಭೆಯಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷರು ಈಗಾಗಲೇ ಸರ್ಕಾರಕ್ಕೆ, ಕೆಪಿಸಿ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ~ ಎಂದರು. <br /> <br /> ಕದ್ರಾ ಕೆಪಿಸಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ರಾಮಕೃಷ್ಣ, ಸಿದ್ದಪ, ಕಾಡಪ್ಪ ಗೌಡ, ಅಶೋಕ ಪವಾರ, ನಾಗರಾಜ ಶೆಟ್ಟಿ, ರವಿಕಾಂತ ವೈದ್ಯ, ರಾಜು ಸಣ್ಣೇಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಕರ್ನಾಟಕ ವಿದ್ಯುತ್ ನಿಗಮದ ನೌಕರರು ತಾಲ್ಲೂಕಿನ ಕದ್ರಾದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಹಮ್ಮಿಕೊಂಡ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.<br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ಕೆಪಿಸಿ ನೌಕರರ ಸಂಘದ ಕಾರ್ಯದರ್ಶಿ ಮಹೇಶ ಕುಡ್ತಲಕರ್ಮಾತನಾಡಿ, `ರಿಮೂಟ್ ಏರಿಯಾ ಭತ್ಯೆ ಮಿತಿ ಹೆಚ್ಚಳ, ತುಟ್ಟಿಭತ್ಯೆ ವಿಲೀನ, ಒಪ್ಪಂದದ ಅವಧಿಯನ್ನು ಏಳು ವರ್ಷದಿಂದ ಐದು ವರ್ಷಕ್ಕೆ ಇಳಿಸಬೇಕು ಎನ್ನುವ ಪ್ರಮುಖ ಬೇಡಿಕೆಗಳು ಆಡಳಿತ ಮಂಡಳಿ ಮುಂದಿಟ್ಟಿದ್ದು ಈ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಯುತ್ತದೆ~ ಎಂದರು.<br /> <br /> `ಬೇಡಿಕೆ ಈಡೇರಿಸುವುದಕ್ಕೆ ಸಂಬಂಧಿಸಿದಂತೆ ಜೂನ್ 21ರಂದು ಇಂಧನ ಸಚಿವರು ಮಾತುಕತೆ ಆಹ್ವಾನಿಸಿದ್ದಾರೆ. ಈ ಸಭೆಯಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷರು ಈಗಾಗಲೇ ಸರ್ಕಾರಕ್ಕೆ, ಕೆಪಿಸಿ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ~ ಎಂದರು. <br /> <br /> ಕದ್ರಾ ಕೆಪಿಸಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ರಾಮಕೃಷ್ಣ, ಸಿದ್ದಪ, ಕಾಡಪ್ಪ ಗೌಡ, ಅಶೋಕ ಪವಾರ, ನಾಗರಾಜ ಶೆಟ್ಟಿ, ರವಿಕಾಂತ ವೈದ್ಯ, ರಾಜು ಸಣ್ಣೇಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>