‘ಈಗಿನ ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ 3,506 ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಪ್ರಸಕ್ತ ಸಾಲಿನಲ್ಲಿ 774 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಾಸರಿ ದಿನಕ್ಕೆ 2ಕ್ಕಿಂತ ಹೆಚ್ಚಿನ ರೈತರು ಆತ್ಮಹತ್ಯೆಗೆ ಶರಣಾಗಿರುವುದು ಅಂಕಿ ಅಂಶಗಳಿಂದ ಕಂಡು ಬಂದಿದೆ. ಇದರಿಂದ ಅವರ ಕುಟುಂಬಗಳು ಸಂಪೂರ್ಣವಾಗಿ ಅತಂತ್ರ ಗೊಂಡಿವೆ’ ಎಂದು ತಿಳಿಸಿದ್ದಾರೆ.