<p><strong>ಸಿದ್ದಾಪುರ: </strong>‘ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕಾದರೆ ರೈತರು ಸಂಘಟಿತರಾಗಬೇಕು’ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ಪಟ್ಟಣದ ಸಿ.ಬಿ.ಪಂಡಿತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಹಳ್ಳಿಗಳ ಜನರು ಕೃಷಿಯಿಂದ ದೂರವಾಗುತ್ತಿದ್ದಾರೆ. ಕೃಷಿಯ ಸಹವಾಸ ಬೇಡ ಎಂದು ಗ್ರಾಮೀಣ ಭಾಗದ ಯುವ ಜನತೆ ನಗರದತ್ತ ಸಾಗುತ್ತಿದ್ದಾರೆ. ಕೃಷಿ ಬದುಕು ಕೃಷಿಕರಿಗೆ ವಿಶ್ವಾಸ ಮೂಡಿಸಬೇಕು.ಆದರೆ ಇಂದು ರೈತರು ಹಲವು ಸಮಸ್ಯೆಗಳ ನಡುವೆ ಜೀವನ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಹಾವಳಿ ಹಾಗೂ ಪ್ರಕೃತಿ ವಿಕೋಪದಿಂದ ಬೆಳೆದ ಬೆಳೆ ನಾಶವಾಗುತ್ತಿದೆ. ಇದಕ್ಕೆ ವೈಜ್ಞಾನಿಕ ಪರಿಹಾರವನ್ನು ಸರ್ಕಾರ ನೀಡಬೇಕು’ ಎಂದರು.<br /> <br /> ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿ ಕಾರಿ ಶ್ರೀಧರ ಭಟ್ಟ, ತಹಶೀಲ್ದಾರ್ ಸುಭಾಷ್ ಫುಲಾರಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾಬಲೇಶ್ವರ ಬಿ.ಎಸ್. ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಾದೇವಿ ರಾಮ ಗೌಡ ಅಧ್ಯಕ್ಷತೆ ವಹಿಸಿದ್ದರು.<br /> <br /> ತಾಲ್ಲೂಕಿನಲ್ಲಿ ಎಕರೆಗೆ ಅತಿ ಹೆಚ್ಚು ಭತ್ತ ಬೆಳೆದ ಗೋಪಾಲ ಹೆಗಡೆ ಹುಲಿಮನೆ(ಪ್ರಥಮ),ಮಾರಿ ಕೆರಿಯಾ (ದ್ವಿತೀಯ)ಹಾಗೂ ಸುಮಿತ್ರಾ ಗೌಡ (ತೃತೀಯ) ಅವರಿಗೆ ಬಹುಮಾನ ನೀಡಲಾಯಿತು.ಗೋಪಾಲ ಹೆಗಡೆ ಹುಲಿಮನೆ ಹಾಗೂ ರವಿಲೋಚನ ಮಡಗಾಂವ್ಕರ್ ಅನಿಸಿಕೆ ವ್ಯಕ್ತಪಡಿಸಿದರು.<br /> <br /> ಸಹಾಯಕ ಕೃಷಿ ನಿರ್ದೇಶಕ ಶಂಕರ ಹೆಗಡೆ ಸ್ವಾಗತಿಸಿದರು. ಜಿ.ಎಸ್.ಪ್ರಶಾಂತ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ: </strong>‘ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕಾದರೆ ರೈತರು ಸಂಘಟಿತರಾಗಬೇಕು’ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ಪಟ್ಟಣದ ಸಿ.ಬಿ.ಪಂಡಿತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಹಳ್ಳಿಗಳ ಜನರು ಕೃಷಿಯಿಂದ ದೂರವಾಗುತ್ತಿದ್ದಾರೆ. ಕೃಷಿಯ ಸಹವಾಸ ಬೇಡ ಎಂದು ಗ್ರಾಮೀಣ ಭಾಗದ ಯುವ ಜನತೆ ನಗರದತ್ತ ಸಾಗುತ್ತಿದ್ದಾರೆ. ಕೃಷಿ ಬದುಕು ಕೃಷಿಕರಿಗೆ ವಿಶ್ವಾಸ ಮೂಡಿಸಬೇಕು.ಆದರೆ ಇಂದು ರೈತರು ಹಲವು ಸಮಸ್ಯೆಗಳ ನಡುವೆ ಜೀವನ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಹಾವಳಿ ಹಾಗೂ ಪ್ರಕೃತಿ ವಿಕೋಪದಿಂದ ಬೆಳೆದ ಬೆಳೆ ನಾಶವಾಗುತ್ತಿದೆ. ಇದಕ್ಕೆ ವೈಜ್ಞಾನಿಕ ಪರಿಹಾರವನ್ನು ಸರ್ಕಾರ ನೀಡಬೇಕು’ ಎಂದರು.<br /> <br /> ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿ ಕಾರಿ ಶ್ರೀಧರ ಭಟ್ಟ, ತಹಶೀಲ್ದಾರ್ ಸುಭಾಷ್ ಫುಲಾರಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾಬಲೇಶ್ವರ ಬಿ.ಎಸ್. ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಾದೇವಿ ರಾಮ ಗೌಡ ಅಧ್ಯಕ್ಷತೆ ವಹಿಸಿದ್ದರು.<br /> <br /> ತಾಲ್ಲೂಕಿನಲ್ಲಿ ಎಕರೆಗೆ ಅತಿ ಹೆಚ್ಚು ಭತ್ತ ಬೆಳೆದ ಗೋಪಾಲ ಹೆಗಡೆ ಹುಲಿಮನೆ(ಪ್ರಥಮ),ಮಾರಿ ಕೆರಿಯಾ (ದ್ವಿತೀಯ)ಹಾಗೂ ಸುಮಿತ್ರಾ ಗೌಡ (ತೃತೀಯ) ಅವರಿಗೆ ಬಹುಮಾನ ನೀಡಲಾಯಿತು.ಗೋಪಾಲ ಹೆಗಡೆ ಹುಲಿಮನೆ ಹಾಗೂ ರವಿಲೋಚನ ಮಡಗಾಂವ್ಕರ್ ಅನಿಸಿಕೆ ವ್ಯಕ್ತಪಡಿಸಿದರು.<br /> <br /> ಸಹಾಯಕ ಕೃಷಿ ನಿರ್ದೇಶಕ ಶಂಕರ ಹೆಗಡೆ ಸ್ವಾಗತಿಸಿದರು. ಜಿ.ಎಸ್.ಪ್ರಶಾಂತ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>