<p>ಮುಂಡಗೋಡ: ವಿದ್ಯುತ್ ಸರಬರಾಜಿನಲ್ಲಿ ಉಂಟಾದ ಏರುಪೇರಿನಿಂದ ಸುಮಾರು 40ಕ್ಕೂ ಹೆಚ್ಚು ಟಿ.ವಿ. 10ರಷ್ಟು ಮಿಕ್ಸರ್ ಸೇರಿದಂತೆ ಗೃಹೋಪಯೋಗಿ ಸಾಮಗ್ರಿಗಳು ಹಾನಿಯಾದ ಘಟನೆ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ನಲ್ಲಿ ಮಂಗಳವಾರ ಸಂಭವಿಸಿದೆ.<br /> ಹಾನಿಯಾದ ವಸ್ತುಗಳನ್ನು ದುರಸ್ತಿ ಮಾಡಿಸಿಕೊಡುವಂತೆ ಒತ್ತಾಯಿಸಿದ ನಿವಾಸಿಗಳು, ಹಾನಿಯಾದ ವಸ್ತುಗಳನ್ನು ರಸ್ತೆ ಮೇಲಿಟ್ಟು ಪ್ರತಿಭಟನೆ ನಡೆಸಿದರು.<br /> <br /> ನಂತರ ಸ್ಥಳಕ್ಕಾಗಮಿಸಿದ ಹೆಸ್ಕಾಂ ಅಧಿಕಾರಿ ಹಾನಿಯಾದ ವಸ್ತುಗಳನ್ನು ನಾಳೆ ಪರಿಶೀಲಿಸಿ ದುರಸ್ತಿ ಮಾಡಿಸಲಾಗುವದು ಎಂದರು. ಆದರೆ ಇದಕ್ಕೆ ಒಪ್ಪದ ನಿವಾಸಿಗಳು ಹಾನಿಯಾದ ವಸ್ತುಗಳನ್ನು ಹೆಸ್ಕಾಂ ಕಚೇರಿಯಲ್ಲಿಯೇ ಇಟ್ಟುಕೊಂಡು ನಾಳೆ ದುರಸ್ತಿ ಮಾಡಿಸಿಕೊಡಬೇಕೆಂದು ಒತ್ತಾಯಿಸಿದರು.<br /> <br /> ನಂತರ ಆಗಮಿಸಿದ ತಹಶೀಲ್ದಾರ್ ನಾರಾಯಣ ರಾವ್ ಮಾತನಾಡಿ ಸದ್ಯ ಹಾನಿಯಾದ ವಸ್ತುಗಳನ್ನು ಮರಳಿ ಮನೆಗೆ ತೆಗೆದುಕೊಂಡು ಹೋಗಿ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸವಾಗಲು ನೈಜ ಕಾರಣವನ್ನು ಪತ್ತೆ ಹಚ್ಚಿ ವರದಿ ನೀಡಲಿದ್ದು ನಂತರ ಹಾನಿಯಾದ ವಸ್ತುಗಳನ್ನು ದುರಸ್ತಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡಗೋಡ: ವಿದ್ಯುತ್ ಸರಬರಾಜಿನಲ್ಲಿ ಉಂಟಾದ ಏರುಪೇರಿನಿಂದ ಸುಮಾರು 40ಕ್ಕೂ ಹೆಚ್ಚು ಟಿ.ವಿ. 10ರಷ್ಟು ಮಿಕ್ಸರ್ ಸೇರಿದಂತೆ ಗೃಹೋಪಯೋಗಿ ಸಾಮಗ್ರಿಗಳು ಹಾನಿಯಾದ ಘಟನೆ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ನಲ್ಲಿ ಮಂಗಳವಾರ ಸಂಭವಿಸಿದೆ.<br /> ಹಾನಿಯಾದ ವಸ್ತುಗಳನ್ನು ದುರಸ್ತಿ ಮಾಡಿಸಿಕೊಡುವಂತೆ ಒತ್ತಾಯಿಸಿದ ನಿವಾಸಿಗಳು, ಹಾನಿಯಾದ ವಸ್ತುಗಳನ್ನು ರಸ್ತೆ ಮೇಲಿಟ್ಟು ಪ್ರತಿಭಟನೆ ನಡೆಸಿದರು.<br /> <br /> ನಂತರ ಸ್ಥಳಕ್ಕಾಗಮಿಸಿದ ಹೆಸ್ಕಾಂ ಅಧಿಕಾರಿ ಹಾನಿಯಾದ ವಸ್ತುಗಳನ್ನು ನಾಳೆ ಪರಿಶೀಲಿಸಿ ದುರಸ್ತಿ ಮಾಡಿಸಲಾಗುವದು ಎಂದರು. ಆದರೆ ಇದಕ್ಕೆ ಒಪ್ಪದ ನಿವಾಸಿಗಳು ಹಾನಿಯಾದ ವಸ್ತುಗಳನ್ನು ಹೆಸ್ಕಾಂ ಕಚೇರಿಯಲ್ಲಿಯೇ ಇಟ್ಟುಕೊಂಡು ನಾಳೆ ದುರಸ್ತಿ ಮಾಡಿಸಿಕೊಡಬೇಕೆಂದು ಒತ್ತಾಯಿಸಿದರು.<br /> <br /> ನಂತರ ಆಗಮಿಸಿದ ತಹಶೀಲ್ದಾರ್ ನಾರಾಯಣ ರಾವ್ ಮಾತನಾಡಿ ಸದ್ಯ ಹಾನಿಯಾದ ವಸ್ತುಗಳನ್ನು ಮರಳಿ ಮನೆಗೆ ತೆಗೆದುಕೊಂಡು ಹೋಗಿ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸವಾಗಲು ನೈಜ ಕಾರಣವನ್ನು ಪತ್ತೆ ಹಚ್ಚಿ ವರದಿ ನೀಡಲಿದ್ದು ನಂತರ ಹಾನಿಯಾದ ವಸ್ತುಗಳನ್ನು ದುರಸ್ತಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>