ಹೀಗಿರುವಾಗ ದೇವಸ್ಥಾನಗಳ ಆಡಳಿತವನ್ನು ಸರ್ಕಾರ ಪಡೆಯಲು ಮುಂದಾಗಿರುವುದು ಸರಿಯಲ್ಲ. ಅಲ್ಲದೇ ಮುಂಬರುವ ಆಡಳಿತಾಧಿಕಾರಿಗಳಿಗೆ ರಥೋತ್ಸವ, ಧಾರ್ಮಿಕ ಕಾರ್ಯಗಳನ್ನು ಮಾಡಲು ಅನುಭವದ ಕೊರತೆ ಇರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಹಿಂದೂ ಧರ್ಮ, ದೇವಸ್ಥಾನಗಳು ಭಕ್ತರ ನಂಬಿಕೆ ಮೇಲೆ ನಿಂತಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಬಂದ ಸೂಚನೆಯಂತೆ ದೇವಸ್ಥಾನಗಳ ಅಧಿಕಾರವನ್ನು ತಹಶೀಲ್ದಾರ್ ತಮ್ಮ ವ್ಯಾಪ್ತಿಗೆ ಪಡೆದುಕೊಳ್ಳದಂತೆ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ತು ರಚನೆಯಾ ಗುವವರೆಗೆ ಈಗಿರು ವಂತೆಯೇ ಆಡಳಿತ ಮಂಡಳಿ ಮುಂದುವರಿಯಲು ಅವಕಾಶ ನೀಡಬೇಕು. ಬಲವಂತವಾಗಿ ದೇವಸ್ಥಾನದ ಆಡಳಿತವನ್ನು ವಶಕ್ಕೆ ತೆಗೆದುಕೊಳ್ಳಲು ಮುಂದಾದಲ್ಲಿ ಉಗ್ರ ರೂಪದ ಪ್ರತಿಭಟನೆ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಬಾಲಕೃಷ್ಣ ಶಾಸ್ತ್ರ, ಎ.ಎನ್.ಪೈ, ಎಲ್.ಕೆ. ಮೊಗೇರ್, ಗೋವಿಂದ ನಾಯ್ಕ, ಕೃಷ್ಣ ನಾಯ್ಕ, ಪರಮೇಶ್ವರ ನಾಯ್ಕ, ವಸಂತ ಖಾರ್ವಿ, ವಕೀಲ ರಾಜೇಶ ನಾಯ್ಕ, ವೆಂಕಟೇಶ ಪ್ರಭು, ಗಣಪತಿ ನಾಯ್ಕ, ಜೆ.ಎನ್. ನಾಯ್ಕ ಮುಂತಾದವರು ಉಪಸ್ಥಿತರಿದ್ದರು.