<p><strong>ಭಟ್ಕಳ</strong>: ‘ಟಿಕೆಟ್ಗಾಗಿ ಪರಸ್ಪರ ಕಾಲೆಳೆದುಕೊಳ್ಳುತ್ತಿರುವ ಕಾಂಗ್ರೆಸ್ ಜಿಲ್ಲೆಯಲ್ಲಿ ಚುನಾವಣೆಗೂ ಮೊದಲೇ ಸೋಲನ್ನು ಒಪ್ಪಿಕೊಂಡಿದೆ’ ಎಂದು ಸಂಸದ ಹಾಗೂ ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಹೇಳಿದರು.<br /> <br /> ಶಿರಾಲಿ ಶಾರದಹೊಳೆ ನಾಮಧಾರಿ ಸಭಾಭವನದಲ್ಲಿ ಭಾನುವಾರ ನಡೆದ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. <br /> <br /> ‘ದೇಶಕ್ಕೆ ದಿಟ್ಟ ನಾಯಕತ್ವದ ಅಗತ್ಯತೆ ಇದ್ದು, ನರೇಂದ್ರ ಮೋದಿಯವರು ಮುಂದಿನ ದಿನಗಳಲ್ಲಿ ಪ್ರಧಾನಿಯಾಗುವ ಮೂಲಕ ಆ ಕೊರತೆಯನ್ನು ತುಂಬಲಿದ್ದಾರೆ. ರಾಜಕೀಯದಲ್ಲಿ ಕೇಜ್ರಿವಾಲ್ ಕ್ಷಣಿಕ ಮಾತ್ರ’ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ ನಾಯ್ಕ, ಪ್ರಮುಖರಾದ ಗಾಯತ್ರಿಗೌಡ, ಸೂರಜ್ ಸೋನಿ, ವಿನೋದ ಪ್ರಭು, ಕೇಶವ ಬಳ್ಕೂರ್, ಕೃಷ್ಣ ನಾಯ್ಕ ಆಸರಕೇರಿ ಮುಂತಾದವರು ಮಾತನಾಡಿದರು.<br /> <br /> ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಈಶ್ವರ ದೊಡ್ಮನೆ ಸ್ವಾಗತಿಸಿದರು. ಜಿಲ್ಲಾ ಘಟಕದ ಕಾರ್ಯದರ್ಶಿ ಗೋವಿಂದ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ ಜೈನ್ ನಿರೂಪಿಸಿದರು.<br /> <br /> ಮದನ್ ನಾಯ್ಕ, ಸುಭದ್ರಾ ದೇವಾಡಿಗ, ಸವಿತಾ ಗೊಂಡ, ದಿನೇಶ ನಾಯ್ಕ, ರಾಜು ಮುರ್ಡೇಶ್ವರ, ಪಾರ್ಶ್ವನಾಥ ಜೈನ್, ನಾಗರಾಜ ಹೆಗಡೆ, ಶಾಂತಿ ಮೊಗೇರ್, ಕಿಶನ್ಬಲ್ಸೆ, ವೆಂಕಟೇಶ ನಾಯ್ಕ ಸೇರಿದಂತೆ ನೂರಾರು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ‘ಟಿಕೆಟ್ಗಾಗಿ ಪರಸ್ಪರ ಕಾಲೆಳೆದುಕೊಳ್ಳುತ್ತಿರುವ ಕಾಂಗ್ರೆಸ್ ಜಿಲ್ಲೆಯಲ್ಲಿ ಚುನಾವಣೆಗೂ ಮೊದಲೇ ಸೋಲನ್ನು ಒಪ್ಪಿಕೊಂಡಿದೆ’ ಎಂದು ಸಂಸದ ಹಾಗೂ ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಹೇಳಿದರು.<br /> <br /> ಶಿರಾಲಿ ಶಾರದಹೊಳೆ ನಾಮಧಾರಿ ಸಭಾಭವನದಲ್ಲಿ ಭಾನುವಾರ ನಡೆದ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. <br /> <br /> ‘ದೇಶಕ್ಕೆ ದಿಟ್ಟ ನಾಯಕತ್ವದ ಅಗತ್ಯತೆ ಇದ್ದು, ನರೇಂದ್ರ ಮೋದಿಯವರು ಮುಂದಿನ ದಿನಗಳಲ್ಲಿ ಪ್ರಧಾನಿಯಾಗುವ ಮೂಲಕ ಆ ಕೊರತೆಯನ್ನು ತುಂಬಲಿದ್ದಾರೆ. ರಾಜಕೀಯದಲ್ಲಿ ಕೇಜ್ರಿವಾಲ್ ಕ್ಷಣಿಕ ಮಾತ್ರ’ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ ನಾಯ್ಕ, ಪ್ರಮುಖರಾದ ಗಾಯತ್ರಿಗೌಡ, ಸೂರಜ್ ಸೋನಿ, ವಿನೋದ ಪ್ರಭು, ಕೇಶವ ಬಳ್ಕೂರ್, ಕೃಷ್ಣ ನಾಯ್ಕ ಆಸರಕೇರಿ ಮುಂತಾದವರು ಮಾತನಾಡಿದರು.<br /> <br /> ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಈಶ್ವರ ದೊಡ್ಮನೆ ಸ್ವಾಗತಿಸಿದರು. ಜಿಲ್ಲಾ ಘಟಕದ ಕಾರ್ಯದರ್ಶಿ ಗೋವಿಂದ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ ಜೈನ್ ನಿರೂಪಿಸಿದರು.<br /> <br /> ಮದನ್ ನಾಯ್ಕ, ಸುಭದ್ರಾ ದೇವಾಡಿಗ, ಸವಿತಾ ಗೊಂಡ, ದಿನೇಶ ನಾಯ್ಕ, ರಾಜು ಮುರ್ಡೇಶ್ವರ, ಪಾರ್ಶ್ವನಾಥ ಜೈನ್, ನಾಗರಾಜ ಹೆಗಡೆ, ಶಾಂತಿ ಮೊಗೇರ್, ಕಿಶನ್ಬಲ್ಸೆ, ವೆಂಕಟೇಶ ನಾಯ್ಕ ಸೇರಿದಂತೆ ನೂರಾರು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>