ಈ ಯೋಜನೆಗೆ ಕೇಂದ್ರದ ಜಲಸಂಪನ್ಮೂಲ ಇಲಾಖೆಯೂ ಒಪ್ಪಿಗೆ ನೀಡಿದೆ. ಕೇಂದ್ರದ ಅನುಮತಿಯೂ ಬೇಕಾಗಿಲ್ಲ. ಮೇಕೆದಾಟು ಯೋಜನೆ ಕುಡಿಯುವ ನೀರಿಗಾಗಿ ರೂಪಿಸುವ ಯೋಜನೆ. ಕುಡಿಯುವ ನೀರಿನ ಯೋಜನೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿಲ್ಲ. ಜಲಸಂಪನ್ಮೂಲ ಇಲಾಖೆ ತನ್ನ ಒಪ್ಪಿಗೆ ಸೂಚಿಸಿದೆ. ಹೀಗಾಗಿ ರಾಜ್ಯ ಸರ್ಕಾರ ಯೋಜನೆ ನಿರ್ಮಾಣಕ್ಕೆ ಯಾವ ತೊಂದರೆ ಇಲ್ಲದೆ ಮುಂದುವರೆಯಬಹುದು. ಆದರೆ, ರಾಜ್ಯ ಸರ್ಕಾರ ತೀರ ಮಂದಗತಿಯಲ್ಲಿ ಹೆಜ್ಜೆ ಹಾಕುತ್ತಿದೆ ಎಂದು ವಾಟಾಳ್ ನಾಗರಾಜ್ ಟೀಕಿಸಿದರು.