ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರವಾನಗಿ ರದ್ದು; ಎಚ್ಚರಿಕೆ

ಶಾಲಾ ವಾಹನಗಳಲ್ಲಿ ಹೆಚ್ಚು ಮಕ್ಕಳು
Last Updated 15 ಜೂನ್ 2019, 14:39 IST
ಅಕ್ಷರ ಗಾತ್ರ

ವಿಜಯಪುರ: ಶಾಲಾ ವಾಹನ, ಆಟೊಗಳಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ಮಕ್ಕಳನ್ನು ಕರೆದೊಯ್ದರೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅವರ ಸೂಚನೆ ಹಾಗೂ ಮಾರ್ಗದರ್ಶನದಂತೆ ವಿಜಯಪುರ ನಗರ, ಬಸವನಬಾಗೇವಾಡಿ ಹಾಗೂ ಇಂಡಿ ಪಟ್ಟಣದಲ್ಲಿ ಆಟೊ–ಓಮ್ನಿ ಹಾಗೂ ಮಕ್ಕಳನ್ನು ಕರೆದೊಯ್ಯುವ ಖಾಸಗಿ ವಾಹನಗಳನ್ನು ಶುಕ್ರವಾರ ತಪಾಸಣೆಗೆ ಒಳಪಡಿಸಿದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ನಿಯಮ ಮೀರಿ ಹೆಚ್ಚು ಮಕ್ಕಳನ್ನು ಸಾಗಿಸಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.

ಸಭೆಯಲ್ಲಿ ಚರ್ಚೆ: ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಆಯುಕ್ತರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿರುವ ಪ್ರಕಾಶ್ ನಿಕ್ಕಂ, ಮಕ್ಕಳ ಸುರಕ್ಷತೆಗೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಕರಣ ಮರುಕಳಿಸಿದಲ್ಲಿ ಶಿಕ್ಷೆ ಖಚಿತ ಎಂಬ ಖಡಕ್ ಸಂದೇಶವನ್ನು ರವಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT