ಸೇತುವೆಯ ಎರಡೂ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸೇತುವೆಗೆ ಹೊಂದಿಕೊಂಡಿರುವ ಬಾಳೆಗದ್ದೆಗಳಿಗೆ ನೀರು ನುಗ್ಗಿದೆ.
ಅನೇಕ ದಿನಗಳ ಹಿಂದೆಯೇ ಹಂಪಿಯ ಸ್ನಾನಘಟ್ಟ, ಕರ್ಮ ಮಂಟಪ, ಪುರಂದರದಾಸರ ಮಂಟಪ, ಚಕ್ರತೀರ್ಥ, ವಿಜಯನಗರ ಕಾಲದ ಕಾಲು ಸೇತುವೆ ಸ್ಮಾರಕಗಳು ಮುಳುಗಿವೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 1,631.91 ಅಡಿ ನೀರಿನ ಸಂಗ್ರಹವಿದೆ. 120470 ಕ್ಯುಸೆಕ್ ಒಳಹರಿವು ಇದೆ. 105909 ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ.
ಇನ್ನು, ಜಿಲ್ಲೆಯಾದ್ಯಂತ ಮಳೆ ತಗ್ಗಿದ್ದು, ಕಾರ್ಮೋಡ ಆವರಿಸಿಕೊಂಡಿದೆ.