<p><strong>ಹೊಸಪೇಟೆ (ವಿಜಯನಗರ):</strong> ಅಂಧತ್ವ ಪ್ರಮಾಣ ದರವನ್ನು ಇಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಉದ್ದೇಶದಿಂದ ಜಿಲ್ಲೆಯ 12 ಕಡೆಗಳಲ್ಲಿ ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಂಕರನಾಯ್ಕ ಎಲ್.ಆರ್. ತಿಳಿಸಿದರು.</p>.<p>ನಗರದ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿದ ನೂತನ ಆಶಾಕಿರಣ ದೃಷ್ಟಿಕೇಂದ್ರವನ್ನು ಗುರುವಾರ ಅವರು ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೂಡ್ಲಿಗಿ, ಹಡಗಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಹಂಪಸಾಗರ, ಇಟಿಗಿ, ತೆಲಗಿ, ಅರಸೀಕೆರಿ, ಚಿಕ್ಕಜೋಗಿಹಳ್ಳಿ, ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ’ ಎಂದರು.</p>.<p>‘ಇಲ್ಲಿ ಪರೀಕ್ಷೆ ನಡೆಸಿ ಉಚಿತವಾಗಿ ಕನ್ನಡಕ ನೀಡಲಾಗುತ್ತದೆ. ಶಸ್ತ್ರಚಿಕಿತ್ಸೆ ಅಗತ್ಯ ಇದ್ದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ’ ಎಂದರು.</p>.<p>‘2024-25ನೇ ಸಾಲಿನಲ್ಲಿ ಶಾಲಾ ಮಕ್ಕಳಿಗೆ ಒಟ್ಟು 4,333 ಕನ್ನಡಕಗಳು ಹಾಗೂ ಜಿಲ್ಲೆಯಲ್ಲಿ 1,580 ಕನ್ನಡಕಗಳನ್ನು ಉಚಿತವಾಗಿ ಫಲಾನುಭವಿಗಳಿಗೆ ವಿತರಿಸಲಾಗಿದೆ. ಜೊತೆಗೆ 2025-26ನೇ ಸಾಲಿನಲ್ಲಿ 10,500 ಜನ ಫಲಾನುಭವಿಗಳನ್ನು ಗುರುತಿಸಿ ಉಚಿತ ಕನ್ನಡಕಗಳನ್ನು ವಿತರಿಸುವ ಗುರಿ ಹೊಂದಲಾಗಿದೆ’ ಎಂದರು.</p>.<p>ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕೆ.ರಾಧಿಕಾ, ಜಿಲ್ಲಾ ಕ್ಷಯರೋಗ ನಿರ್ಮೂಲಾಧಿಕಾರಿ ಡಾ.ಡಿ.ಭಾಸ್ಕರ್, ಮುಖ್ಯ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ನೇತ್ರ ತಜ್ಞ ಡಾ.ರಾಜಶೇಖರ್, ಡಾ.ರಾಘವೇಂದ್ರ, ಡಾ.ಕೊಟ್ರೇಶ್, ನೇತ್ರಾಧಿಕಾರಿ ನಜಬುನ್ನಿಸಾ ಬೇಗಂ, ವಾಣಿಶ್ರೀ, ವೆಂಕಟೇಶ್, ಹನುಮಂತರೆಡ್ಡಿ, ಗಿಡ್ಡ ಗಂಗಪ್ಪ, ಗುಂಡಿ ರಾಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಅಂಧತ್ವ ಪ್ರಮಾಣ ದರವನ್ನು ಇಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಉದ್ದೇಶದಿಂದ ಜಿಲ್ಲೆಯ 12 ಕಡೆಗಳಲ್ಲಿ ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಂಕರನಾಯ್ಕ ಎಲ್.ಆರ್. ತಿಳಿಸಿದರು.</p>.<p>ನಗರದ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿದ ನೂತನ ಆಶಾಕಿರಣ ದೃಷ್ಟಿಕೇಂದ್ರವನ್ನು ಗುರುವಾರ ಅವರು ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೂಡ್ಲಿಗಿ, ಹಡಗಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಹಂಪಸಾಗರ, ಇಟಿಗಿ, ತೆಲಗಿ, ಅರಸೀಕೆರಿ, ಚಿಕ್ಕಜೋಗಿಹಳ್ಳಿ, ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ’ ಎಂದರು.</p>.<p>‘ಇಲ್ಲಿ ಪರೀಕ್ಷೆ ನಡೆಸಿ ಉಚಿತವಾಗಿ ಕನ್ನಡಕ ನೀಡಲಾಗುತ್ತದೆ. ಶಸ್ತ್ರಚಿಕಿತ್ಸೆ ಅಗತ್ಯ ಇದ್ದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ’ ಎಂದರು.</p>.<p>‘2024-25ನೇ ಸಾಲಿನಲ್ಲಿ ಶಾಲಾ ಮಕ್ಕಳಿಗೆ ಒಟ್ಟು 4,333 ಕನ್ನಡಕಗಳು ಹಾಗೂ ಜಿಲ್ಲೆಯಲ್ಲಿ 1,580 ಕನ್ನಡಕಗಳನ್ನು ಉಚಿತವಾಗಿ ಫಲಾನುಭವಿಗಳಿಗೆ ವಿತರಿಸಲಾಗಿದೆ. ಜೊತೆಗೆ 2025-26ನೇ ಸಾಲಿನಲ್ಲಿ 10,500 ಜನ ಫಲಾನುಭವಿಗಳನ್ನು ಗುರುತಿಸಿ ಉಚಿತ ಕನ್ನಡಕಗಳನ್ನು ವಿತರಿಸುವ ಗುರಿ ಹೊಂದಲಾಗಿದೆ’ ಎಂದರು.</p>.<p>ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕೆ.ರಾಧಿಕಾ, ಜಿಲ್ಲಾ ಕ್ಷಯರೋಗ ನಿರ್ಮೂಲಾಧಿಕಾರಿ ಡಾ.ಡಿ.ಭಾಸ್ಕರ್, ಮುಖ್ಯ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ನೇತ್ರ ತಜ್ಞ ಡಾ.ರಾಜಶೇಖರ್, ಡಾ.ರಾಘವೇಂದ್ರ, ಡಾ.ಕೊಟ್ರೇಶ್, ನೇತ್ರಾಧಿಕಾರಿ ನಜಬುನ್ನಿಸಾ ಬೇಗಂ, ವಾಣಿಶ್ರೀ, ವೆಂಕಟೇಶ್, ಹನುಮಂತರೆಡ್ಡಿ, ಗಿಡ್ಡ ಗಂಗಪ್ಪ, ಗುಂಡಿ ರಾಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>