<p><strong>ಹಗರಿಬೊಮ್ಮನಹಳ್ಳಿ:</strong> ತಾಲ್ಲೂಕಿನ ತಂಬ್ರಹಳ್ಳಿಯಲ್ಲಿರುವ ವಿದ್ಯುತ್ ಸರಬರಾಜು ಉಪ ಕೇಂದ್ರಕ್ಕೆ ಅಳವಡಿಸಲು ಗುಜರಾತ್ನಿಂದ ತರಿಸಲಾದ 20ಎಂವಿಎ ಸಾಮರ್ಥ್ಯದ ವಿದ್ಯುತ್ ಪರಿವರ್ತಕ(ಟ್ರಾನ್ಸ್ಫಾರ್ಮರ್)ಕ್ಕೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಬರಮಾಡಿಕೊಂಡರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಈ ಭಾಗದಲ್ಲಿ ಕೃಷಿ ಆಧಾರಿತ ಕುಟುಂಬಗಳು ಹೆಚ್ಚಿದ್ದು ರೈತರ ಪಂಪ್ಸೆಟ್ಗಳು ಅಪಾರ ಸಂಖ್ಯೆಯಲ್ಲಿವೆ, ಇದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ತುಂಬ ವ್ಯತ್ಯಯವಾಗುತ್ತಿತ್ತು, ಇದರಿಂದಾಗಿ ಬೆಳೆಗಳು ಒಣಗುತ್ತಿದ್ದವು. ರೈತರು ನಷ್ಟ ಅನುಭವಿಸುವ ಅನಿವಾರ್ಯತೆ ಇತ್ತು. ಈ ಭಾಗದ ರೈತರೊಂದಿಗೆ ನಿರಂತರ ಹೋರಾಟ ಮಾಡಿದ ಫಲವಾಗಿ ಜಿಲ್ಲಾ ಉಸ್ತುವಾರಿ ಸಚಿವರು ವಿದ್ಯುತ್ ಉಪಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿದ್ದಾರೆ, ₹10ಕೋಟಿ ಮೊತ್ತದ ವಿದ್ಯುತ್ ಪರಿವರ್ತಕ ಒದಗಿಸಿದ್ದಾರೆ ಎಂದರು.</p>.<p>ಇನ್ನುಮುಂದೆ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗುವುದಿಲ್ಲ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪಿ.ಕೊಟ್ರೇಶ್, ಪಿಕೆಪಿಎಸ್ ಅಧ್ಯಕ್ಷ ಮಾಬುಸಾಹೇಬ್, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಜಿ.ಸುರೇಶ್, ಮುಖಂಡರಾದ ಮೈಲಾರದ ಶಿವಕುಮಾರ್, ಮಂಜುನಾಥ ಪಾಟೀಲ್, ಬಸವಲಿಂಗನಗೌಡ, ರಾಜಾಸಾಬ್, ಖಾಜಾ ಸಾಹೇಬ್, ಟಿ.ಫಕ್ಕೀರಪ್ಪ, ದೊಡ್ಡಬಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ:</strong> ತಾಲ್ಲೂಕಿನ ತಂಬ್ರಹಳ್ಳಿಯಲ್ಲಿರುವ ವಿದ್ಯುತ್ ಸರಬರಾಜು ಉಪ ಕೇಂದ್ರಕ್ಕೆ ಅಳವಡಿಸಲು ಗುಜರಾತ್ನಿಂದ ತರಿಸಲಾದ 20ಎಂವಿಎ ಸಾಮರ್ಥ್ಯದ ವಿದ್ಯುತ್ ಪರಿವರ್ತಕ(ಟ್ರಾನ್ಸ್ಫಾರ್ಮರ್)ಕ್ಕೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಬರಮಾಡಿಕೊಂಡರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಈ ಭಾಗದಲ್ಲಿ ಕೃಷಿ ಆಧಾರಿತ ಕುಟುಂಬಗಳು ಹೆಚ್ಚಿದ್ದು ರೈತರ ಪಂಪ್ಸೆಟ್ಗಳು ಅಪಾರ ಸಂಖ್ಯೆಯಲ್ಲಿವೆ, ಇದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ತುಂಬ ವ್ಯತ್ಯಯವಾಗುತ್ತಿತ್ತು, ಇದರಿಂದಾಗಿ ಬೆಳೆಗಳು ಒಣಗುತ್ತಿದ್ದವು. ರೈತರು ನಷ್ಟ ಅನುಭವಿಸುವ ಅನಿವಾರ್ಯತೆ ಇತ್ತು. ಈ ಭಾಗದ ರೈತರೊಂದಿಗೆ ನಿರಂತರ ಹೋರಾಟ ಮಾಡಿದ ಫಲವಾಗಿ ಜಿಲ್ಲಾ ಉಸ್ತುವಾರಿ ಸಚಿವರು ವಿದ್ಯುತ್ ಉಪಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿದ್ದಾರೆ, ₹10ಕೋಟಿ ಮೊತ್ತದ ವಿದ್ಯುತ್ ಪರಿವರ್ತಕ ಒದಗಿಸಿದ್ದಾರೆ ಎಂದರು.</p>.<p>ಇನ್ನುಮುಂದೆ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗುವುದಿಲ್ಲ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪಿ.ಕೊಟ್ರೇಶ್, ಪಿಕೆಪಿಎಸ್ ಅಧ್ಯಕ್ಷ ಮಾಬುಸಾಹೇಬ್, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಜಿ.ಸುರೇಶ್, ಮುಖಂಡರಾದ ಮೈಲಾರದ ಶಿವಕುಮಾರ್, ಮಂಜುನಾಥ ಪಾಟೀಲ್, ಬಸವಲಿಂಗನಗೌಡ, ರಾಜಾಸಾಬ್, ಖಾಜಾ ಸಾಹೇಬ್, ಟಿ.ಫಕ್ಕೀರಪ್ಪ, ದೊಡ್ಡಬಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>