<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವ ಕಾರ್ಯ ಮಂಗಳವಾರದಿಂದ ಆರಂಭವಾಗಿದ್ದು, ಇದಕ್ಕಾಗಿ ನೀರಿನ ಪ್ರಮಾಣ ಕಡಿಮೆ ಮಾಡುವ ಹಿನ್ನೆಲೆಯಲ್ಲಿ ನದಿಗೆ 5,500 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<p>ಜಲಾಶಯದಲ್ಲಿ ಪ್ರಸ್ತು 63.998 ಟಿಎಂಸಿ ನೀರು ಸಂಗ್ರಹ ಇದ್ದು, ಗೇಟ್ ಅನ್ನು ಅಳವಡಿಸುವ ಹಿನ್ನೆಲೆಯಲ್ಲಿ ಈ ನೀರನ್ನು ಕಡಿಮೆಗೊಳಿಸಿ, 43 ಟಿಎಂಸಿ ಮಟ್ಟಕ್ಕೆ ತರಬೇಕಿದೆ. ಆಗ ಗೇಟಿನ ಪೂರ್ಣ ಭಾಗವನ್ನು ತೆರವುಗೊಳಿಸಲು ಸಾಧ್ಯವಾಗಲಿದೆ.</p>.<p>ಈ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟವನ್ನು ಇಳಿಸುವ ಕುರಿತು ರಾಜ್ಯ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಅಧಿಕಾರಿಗಳ ಮಟ್ಟದ ವರ್ಚುವಲ್ ಸಭೆಯನ್ನು ಮಂಗಳವಾರ ನಡೆಸಲಾಗಿದೆ.</p>.<p>ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಆಯಾ ರಾಜ್ಯಗಳಿಗೆ ಹರಿಸಬಹುದಾದ ನೀರನ್ನು ಕಾಲುವೆ ಹಾಗೂ ನದಿಯ ಮೂಲಕ ಹರಿಸಲು ಸಭೆ ನಿರ್ಣಯ ಕೈಗೊಂಡಿತು. ಆಯಾ ರಾಜ್ಯಗಳ ಅಗತ್ಯಕ್ಕೆ ಅನುಗುಣವಾಗಿ ಕುಡಿಯುವ ನೀರನ್ನು ಬಿಡುಗಡೆ ಮಾಡಲು ಸಹ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಜಲಾಶಯದ 33 ಕ್ರೆಸ್ ಗೇಟ್ಗಳ ಪೈಕಿ 18ನೇ ಗೇಟ್ ಅನ್ನು ಯಶಸ್ವಿಯಾಗಿ ತೆರವುಗೊಳಿಸಿದ ಬಳಿಕ, ಈಗ 20ನೇ ಗೇಟ್ ಅನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಉಳಿದ ಗೇಟ್ಗಳನ್ನು ಡಿ.20ರಿಂದ ಹಂತ ಹಂತವಾಗಿ ತೆರವುಗೊಳಿಸಿದ ಬಳಿಕ ಹೊಸ ಗೇಟ್ಗಳನ್ನು ಅಳವಡಿಸಲು ಮಂಡಳಿ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವ ಕಾರ್ಯ ಮಂಗಳವಾರದಿಂದ ಆರಂಭವಾಗಿದ್ದು, ಇದಕ್ಕಾಗಿ ನೀರಿನ ಪ್ರಮಾಣ ಕಡಿಮೆ ಮಾಡುವ ಹಿನ್ನೆಲೆಯಲ್ಲಿ ನದಿಗೆ 5,500 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<p>ಜಲಾಶಯದಲ್ಲಿ ಪ್ರಸ್ತು 63.998 ಟಿಎಂಸಿ ನೀರು ಸಂಗ್ರಹ ಇದ್ದು, ಗೇಟ್ ಅನ್ನು ಅಳವಡಿಸುವ ಹಿನ್ನೆಲೆಯಲ್ಲಿ ಈ ನೀರನ್ನು ಕಡಿಮೆಗೊಳಿಸಿ, 43 ಟಿಎಂಸಿ ಮಟ್ಟಕ್ಕೆ ತರಬೇಕಿದೆ. ಆಗ ಗೇಟಿನ ಪೂರ್ಣ ಭಾಗವನ್ನು ತೆರವುಗೊಳಿಸಲು ಸಾಧ್ಯವಾಗಲಿದೆ.</p>.<p>ಈ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟವನ್ನು ಇಳಿಸುವ ಕುರಿತು ರಾಜ್ಯ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಅಧಿಕಾರಿಗಳ ಮಟ್ಟದ ವರ್ಚುವಲ್ ಸಭೆಯನ್ನು ಮಂಗಳವಾರ ನಡೆಸಲಾಗಿದೆ.</p>.<p>ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಆಯಾ ರಾಜ್ಯಗಳಿಗೆ ಹರಿಸಬಹುದಾದ ನೀರನ್ನು ಕಾಲುವೆ ಹಾಗೂ ನದಿಯ ಮೂಲಕ ಹರಿಸಲು ಸಭೆ ನಿರ್ಣಯ ಕೈಗೊಂಡಿತು. ಆಯಾ ರಾಜ್ಯಗಳ ಅಗತ್ಯಕ್ಕೆ ಅನುಗುಣವಾಗಿ ಕುಡಿಯುವ ನೀರನ್ನು ಬಿಡುಗಡೆ ಮಾಡಲು ಸಹ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಜಲಾಶಯದ 33 ಕ್ರೆಸ್ ಗೇಟ್ಗಳ ಪೈಕಿ 18ನೇ ಗೇಟ್ ಅನ್ನು ಯಶಸ್ವಿಯಾಗಿ ತೆರವುಗೊಳಿಸಿದ ಬಳಿಕ, ಈಗ 20ನೇ ಗೇಟ್ ಅನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಉಳಿದ ಗೇಟ್ಗಳನ್ನು ಡಿ.20ರಿಂದ ಹಂತ ಹಂತವಾಗಿ ತೆರವುಗೊಳಿಸಿದ ಬಳಿಕ ಹೊಸ ಗೇಟ್ಗಳನ್ನು ಅಳವಡಿಸಲು ಮಂಡಳಿ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>