<p><strong>ಹೊಸಪೇಟೆ (ವಿಜಯನಗರ): ನ</strong>ಗರದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯ ಯುಜಿಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದು ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.</p>.<p>‘ಕುಡಿಯುವ ನೀರಿನ ಪೈಪ್ಲೈನ್ಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು. ಅಭಿವೃದ್ಧಿಗೆ ಆದ್ಯತೆ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.</p>.<p>ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಮಾತನಾಡಿ, ಅಡಳಿತ ಸುಧಾರಣೆಗೆ ನಗರಸಭೆ ಅಧಿಕಾರಿಗಳಿಗೆ, ನೌಕರರಿಗೆ ಆಡಳಿತ ನಿರ್ವಹಣಾ ತರಬೇತಿಗಳನ್ನು ಕ್ರಮಬದ್ದವಾಗಿ ಆಯೋಜನೆ ಮಾಡಬೇಕು. ವೈಚಾರಿಕ ಮತ್ತು ವೈಜ್ಞಾನಿಕ ಆಡಳಿತಕ್ಕೆ ಪೂರಕವಾಗಿ ಆಡಳಿತ ಸಿಬ್ಬಂದಿಯನ್ನು ನೇಮಿಸಲು ವೃಂದ ನೇಮಕಾತಿಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದರು.</p>.<p>300 ಹುದ್ದೆ ಖಾಲಿ: ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿ, ಒಟ್ಟು 540 ಹುದ್ದೆಗಳ ಪೈಕಿ ಪ್ರಸ್ತುತ 300 ಹುದ್ದೆಗಳು ಖಾಲಿ ಇವೆ. 156 ಖಾಯಂ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆಯಲ್ಲಿ 55 ಪೌರಕಾರ್ಮಿಕರು ಸೇರಿದಂತೆ ಒಟ್ಟು 211 ಪೌರಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.</p>.<p>ಆಯೋಗ ಸದಸ್ಯರಾದ ಮಹಮ್ಮದ್ ಸನಾವುಲ್ಲ, ಆರ್.ಎಸ್.ಫೋಂಡೆ, ಸಮಾಲೋಚಕರಾದ ಸುಪ್ರಸನ್ನ, ಕೆಂಪೇಗೌಡ, ಅಪ್ತಕಾರ್ಯದರ್ಶಿ ಏಲಕ್ಕಿ ಗೌಡ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಶಂಕ್ರಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): ನ</strong>ಗರದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯ ಯುಜಿಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದು ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.</p>.<p>‘ಕುಡಿಯುವ ನೀರಿನ ಪೈಪ್ಲೈನ್ಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು. ಅಭಿವೃದ್ಧಿಗೆ ಆದ್ಯತೆ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.</p>.<p>ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಮಾತನಾಡಿ, ಅಡಳಿತ ಸುಧಾರಣೆಗೆ ನಗರಸಭೆ ಅಧಿಕಾರಿಗಳಿಗೆ, ನೌಕರರಿಗೆ ಆಡಳಿತ ನಿರ್ವಹಣಾ ತರಬೇತಿಗಳನ್ನು ಕ್ರಮಬದ್ದವಾಗಿ ಆಯೋಜನೆ ಮಾಡಬೇಕು. ವೈಚಾರಿಕ ಮತ್ತು ವೈಜ್ಞಾನಿಕ ಆಡಳಿತಕ್ಕೆ ಪೂರಕವಾಗಿ ಆಡಳಿತ ಸಿಬ್ಬಂದಿಯನ್ನು ನೇಮಿಸಲು ವೃಂದ ನೇಮಕಾತಿಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದರು.</p>.<p>300 ಹುದ್ದೆ ಖಾಲಿ: ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿ, ಒಟ್ಟು 540 ಹುದ್ದೆಗಳ ಪೈಕಿ ಪ್ರಸ್ತುತ 300 ಹುದ್ದೆಗಳು ಖಾಲಿ ಇವೆ. 156 ಖಾಯಂ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆಯಲ್ಲಿ 55 ಪೌರಕಾರ್ಮಿಕರು ಸೇರಿದಂತೆ ಒಟ್ಟು 211 ಪೌರಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.</p>.<p>ಆಯೋಗ ಸದಸ್ಯರಾದ ಮಹಮ್ಮದ್ ಸನಾವುಲ್ಲ, ಆರ್.ಎಸ್.ಫೋಂಡೆ, ಸಮಾಲೋಚಕರಾದ ಸುಪ್ರಸನ್ನ, ಕೆಂಪೇಗೌಡ, ಅಪ್ತಕಾರ್ಯದರ್ಶಿ ಏಲಕ್ಕಿ ಗೌಡ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಶಂಕ್ರಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>