ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಬಸ್ ನಿಲ್ದಾಣದಲ್ಲಿ ಚಕ್ರದಡಿಗೆ ಸಿಲುಕಿ 3 ವರ್ಷದ ಬಾಲಕ ಸಾವು

Published 18 ಮಾರ್ಚ್ 2024, 16:49 IST
Last Updated 18 ಮಾರ್ಚ್ 2024, 16:49 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸಾರಿಗೆ ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಅದರ ಚಕ್ರದಡಿಗೆ ಸಿಲುಕಿ ಮೂರು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

ತಾಲ್ಲೂಕಿನ ನಾಗಲಾಪುರದ ನಿವಾಸಿ ಕೇಸರಿ ನಂದನ್ (3) ಮೃತಪಟ್ಟ ಬಾಲಕ. ತನ್ನ ತಾಯಿ ಮಲ್ಲಮ್ಮ ಜೊತೆಗೆ ಕೊಪ್ಪಳದ ಅಜ್ಜಿಯ ಮನೆಯಿಂದ ಊರಿಗೆ

ವಾಪಸಾಗುತ್ತಿದ್ದಾಗ ಇಲ್ಲಿನ ಬಸ್ ನಿಲ್ದಾಣದ ಗಂಗಾವತಿ ಕಡೆಗೆ ಹೋಗುವ ಪ್ಲಾಟ್ ಫಾರಂನಲ್ಲಿ ನಿಂತಿದ್ದ. ಈ ವೇಳೆ ಬಸ್ ಹಿಂದಕ್ಕೆ ಚಲಿಸಿದ್ದು, ಬಾಲಕ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡ. ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮತೃಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT