<p><strong>ಹೂವಿನಹಡಗಲಿ</strong>: ನೀರಾವರಿ ಪಂಪ್ ಸೆಟ್ಗೆ ವಿದ್ಯುತ್ ಪರಿವರ್ತಕ (ಟಿಸಿ) ನೀಡಲು ರೈತರೊಬ್ಬರಿಂದ ಲಂಚ ಪಡೆಯುವಾಗ ಇಲ್ಲಿನ ಜೆಸ್ಕಾಂ ಉಪ ವಿಭಾಗದ ಎಇಇ ಆರ್.ಆರ್.ಭಾಸ್ಕರ್ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.<br /><br />ತಾಲ್ಲೂಕಿನ ಬಸರಹಳ್ಳಿ ತಾಂಡಾದ ರೈತ ಉಮೇಶನಾಯ್ಕ ಅವರ ಹೊಲದಲ್ಲಿ ಟಿಸಿ ಅಳವಡಿಸಲು ಜೆಸ್ಕಾಂ ಎಇಇ ಭಾಸ್ಕರ್ ₹50 ಸಾವಿರ ಲಂಚ ಕೇಳಿದ್ದರು. ರೈತ ಉಮೇಶನಾಯ್ಕ ಲೈನ್ ಮ್ಯಾನ್ ಮಾರುತಿ ಮೂಲಕ ₹25 ಸಾವಿರ ಮುಂಗಡ ತಲುಪಿಸಿ, ನಂತರ ಈ ಕುರಿತು ಎಸಿಬಿಗೆ ದೂರು ನೀಡಿದ್ದರು.<br /><br />ಜೆಸ್ಕಾಂ ಕಚೇರಿ ಆವರಣದಲ್ಲಿ ಲೈನ್ ಮ್ಯಾನ್ ಮೂಲಕಮತ್ತೆ ₹20 ಸಾವಿರ ಲಂಚದ ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳಾದ ಎಇಇ ಭಾಸ್ಕರ್, ಲೈನ್ ಮ್ಯಾನ್ ಮಾರುತಿ ಅವರನ್ನು ವಶಕ್ಕೆ ಪಡೆದಿದ್ದಾರೆ.<br /><br />ಎಸಿಬಿ ಜಿಲ್ಲಾ ವರಿಷ್ಠಾಧಿಕಾರಿ ಗುರುನಾಥ ಮತ್ತೂರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ಎಂ.ಸಿ.ಶಿವಕುಮಾರ್, ಇನ್ ಸ್ಪೆಕ್ಟರ್ ಗಳಾದ ಹಿರೇಮಠ, ರವಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ನೀರಾವರಿ ಪಂಪ್ ಸೆಟ್ಗೆ ವಿದ್ಯುತ್ ಪರಿವರ್ತಕ (ಟಿಸಿ) ನೀಡಲು ರೈತರೊಬ್ಬರಿಂದ ಲಂಚ ಪಡೆಯುವಾಗ ಇಲ್ಲಿನ ಜೆಸ್ಕಾಂ ಉಪ ವಿಭಾಗದ ಎಇಇ ಆರ್.ಆರ್.ಭಾಸ್ಕರ್ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.<br /><br />ತಾಲ್ಲೂಕಿನ ಬಸರಹಳ್ಳಿ ತಾಂಡಾದ ರೈತ ಉಮೇಶನಾಯ್ಕ ಅವರ ಹೊಲದಲ್ಲಿ ಟಿಸಿ ಅಳವಡಿಸಲು ಜೆಸ್ಕಾಂ ಎಇಇ ಭಾಸ್ಕರ್ ₹50 ಸಾವಿರ ಲಂಚ ಕೇಳಿದ್ದರು. ರೈತ ಉಮೇಶನಾಯ್ಕ ಲೈನ್ ಮ್ಯಾನ್ ಮಾರುತಿ ಮೂಲಕ ₹25 ಸಾವಿರ ಮುಂಗಡ ತಲುಪಿಸಿ, ನಂತರ ಈ ಕುರಿತು ಎಸಿಬಿಗೆ ದೂರು ನೀಡಿದ್ದರು.<br /><br />ಜೆಸ್ಕಾಂ ಕಚೇರಿ ಆವರಣದಲ್ಲಿ ಲೈನ್ ಮ್ಯಾನ್ ಮೂಲಕಮತ್ತೆ ₹20 ಸಾವಿರ ಲಂಚದ ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳಾದ ಎಇಇ ಭಾಸ್ಕರ್, ಲೈನ್ ಮ್ಯಾನ್ ಮಾರುತಿ ಅವರನ್ನು ವಶಕ್ಕೆ ಪಡೆದಿದ್ದಾರೆ.<br /><br />ಎಸಿಬಿ ಜಿಲ್ಲಾ ವರಿಷ್ಠಾಧಿಕಾರಿ ಗುರುನಾಥ ಮತ್ತೂರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ಎಂ.ಸಿ.ಶಿವಕುಮಾರ್, ಇನ್ ಸ್ಪೆಕ್ಟರ್ ಗಳಾದ ಹಿರೇಮಠ, ರವಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>