ಹರಪನಹಳ್ಳಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಕಾಲೊನಿ ಬೈಪಾಸ್ ರಸ್ತೆಯಲ್ಲಿ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ.
ಅಂಬೇಡ್ಕರ್ ಬಡಾವಣೆ ನಿವಾಸಿ ದೊಡ್ಮನೆ ಹನುಮಂತ (40) ಮೃತಪಟ್ಟವರು. ಗುಂಡಿಕೇರಿ ನಿವಾಸಿ ದಾದಾ ಖಲಂದರ್ ಗಾಯಗೊಂಡವರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.