ಹೊಸಪೇಟೆ, ಬಳ್ಳಾರಿ, ಕುರುಗೋಡು, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಸಂಡೂರು ಸೇರಿದಂತೆ ಇತರೆ ಭಾಗಗಳಲ್ಲಿ ಬುಧವಾರ ರಾತ್ರಿ ಉತ್ತಮ ಮಳೆಯಾಗಿದೆ.ರಾತ್ರಿ ಹತ್ತು ಗಂಟೆ ಸುಮಾರಿಗೆ ಆರಂಭಗೊಂಡ ಧಾರಾಕಾರ ಮಳೆ ತಡರಾತ್ರಿ ವರೆಗೂ ಸುರಿದಿದೆ. ಉತ್ತಮ ಮಳೆಗೆ ನಗರ ಹೊರವಲಯದ ರಾಯರ ಕೆರೆಯಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಕಬ್ಬು, ಮೆಕ್ಕೆಜೋಳ ಗದ್ದೆಗೆ ಅಪಾರ ನೀರು ನುಗ್ಗಿದೆ. ಗುರುವಾರ ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ಸಂಜೆ ದಟ್ಟ ಕಾರ್ಮೋಡ ಕವಿದು, ಗುಡುಗು ಮಿಂಚಿನೊಂದಿಗೆ ಪುನಃ ವರ್ಷಧಾರೆಯಾಗಿದೆ.