ಹೊಸಪೇಟೆ (ವಿಜಯನಗರ): ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಕಂಚಿನ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ಆರಂಭವಾಗಿದೆ.
ಪುನೀತ್ ರಾಜಕುಮಾರ್ ವೃತ್ತದಲ್ಲಿ ಪುನೀತ್ ಅವರ 7.4 ಅಡಿ ಎತ್ತರದ ಕಂಚಿನ ಪುತ್ಥಳಿ ಸ್ಥಾಪಿಸಲಾಗಿದೆ. ಡಾ. ರಾಜಕುಮಾರ್ ಕುಟುಂಬ ಸದಸ್ಯರು ಪುತ್ಥಳಿ ಅನಾವರಣಗೊಳಿಸುವರು.
ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾರ್ಯಕ್ರಮ ಆರಂಭವಾಗಲಿದ್ದು, ಸ್ಥಳೀಯ ಕಲಾವಿದರು ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸ್ಥಳದಲ್ಲಿ ನೂರಾರು ಜನ ಪುನೀತ್ ಭಾವಚಿತ್ರ, ಅವರ ಚಿತ್ರವಿರುವ ಧ್ವಜಗಳೊಂದಿಗೆ ಪಾಲ್ಗೊಂಡಿದ್ದಾರೆ.
ಕಾರ್ಯಕ್ರಮದ ನಿಮಿತ್ತ ಪುನೀತ್ ರಾಜಕುಮಾರ್ ವೃತ್ತದಲ್ಲಿ ಸಾರ್ವಜನಿಕ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಜನ ಅಕ್ಕಪಕ್ಕದ ಕಟ್ಟಡಗಳ ಮೇಲೇರಿ ಕುಳಿತಿದ್ದಾರೆ.