<p><strong>ವಿಜಯಪುರ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದ ಪರಿಣಾಮ ಮುಂಗಾರು ಬಿತ್ತನೆಗೆ ಹೊಲವನ್ನು ಸಜ್ಜುಗೊಳಿಸಲು ರೈತರಿಗೆ ಅನುಕೂಲವಾಗಿದೆ.</p>.<p>ವಿಜಯಪುರ ನಗರ, ಇಂಡಿ, ಸಿಂದಗಿ, ತಾಳಿಕೋಟೆ, ಮುದ್ದೇಬಿಹಾಳ, ದೇವರಹಿಪ್ಪರಗಿ, ನಾಲತವಾಡ, ಆಲಮೇಲ, ಕೊಲ್ಹಾರ, ತಾಂಬಾ, ಹೊರ್ತಿ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಬಿರುಸಿನ ಮಳೆಯಾಗಿದೆ. </p>.<p>ಚಂಡಮಾರುತದ ಪರಿಣಾಮ ಮೂರ್ನಾಲ್ಕು ದಿನಗಳಿಂದ ದಟ್ಟ ಮೋಡ ಕವಿದ ವಾತಾವರಣದೊಂದಿಗೆ ರಭಸದ ಗಾಳಿ ಬೀಸುತ್ತಿತ್ತು. ಆದರೆ, ಮಳೆಯಾಗಿರಲಿಲ್ಲ.</p>.<p>ಒಂದು ತಿಂಗಳಿಂದ ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸಿದ್ದರೂ ಜಿಲ್ಲೆಯಲ್ಲಿ ಉತ್ತಮ ಮಳೆ ಆಗಿರಲಿಲ್ಲ. ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗಿತ್ತು. ಈ ಮಳೆ ಕೃಷಿ ಚಟುವಟಿಕೆಗೆ ಅನುಕೂಲಕರವಾಗಿರಲಿಲ್ಲ. ಆದರೆ, ಗುರುವಾರ ಒಂದು ತಾಸಿಗೂ ಅಧಿಕ ಹೊತ್ತು ರಭಸದಿಂದ ಆದ ಮಳೆ ಕೃಷಿ ಚಟುವಟಿಕೆಗಳ ಪ್ರಾರಂಭಕ್ಕೆ ಮುನ್ನುಡಿ ಬರೆದಿದೆ.</p>.<p>ಕಳೆದ ಎರಡು–ಮೂರು ವರ್ಷಗಳಿಂದ ಬೇಸಿಗೆಯಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಈ ವರ್ಷದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಹದ ಮಳೆಯಾಗಿರಲಿಲ್ಲ. ಬಿಸಿಲ ಬೇಗೆಯಿಂದ ಜನ, ಜಾನುವಾರು, ಪ್ರಾಣಿ ಪಕ್ಷಿಗಳು ತತ್ತರಿಸಿದ್ದವು. ಇದೀಗ ಸುರಿದ ಭಾರೀ ಮಳೆಯಿಂದ ತಂಪಾದ ವಾತಾವರಣ ಸೃಷ್ಟಿಯಾಗಿದೆ.</p>.<p>ವಿಜಯಪುರ ನಗರದಲ್ಲಿ ಸುಮಾರು ಒಂದೂವರೆ ತಾಸು ಸುರಿದ ಮಳೆಯಿಂದ ಚರಂಡಿಗಳು ಉಕ್ಕಿ ರಸ್ತೆ ಮೇಲೆ ನೀರು ಹರಿಯಿತು. ಇದರಿಂದ ಜನ ಸಂಚಾರಕ್ಕೆ, ವ್ಯಾಪಾರ, ವಹಿವಾಟಿಗೆ ಅಡಚಣೆಯಾಯಿತು.</p>.<p>ಗಾಳಿ–ಮಳೆಗೆ ವಿದ್ಯುತ್ ಸಂಪರ್ಕ ಕೈಕೊಟ್ಟ ಪರಿಣಾಮ ಬಹಳ ಹೊತ್ತು ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದ ಪರಿಣಾಮ ಮುಂಗಾರು ಬಿತ್ತನೆಗೆ ಹೊಲವನ್ನು ಸಜ್ಜುಗೊಳಿಸಲು ರೈತರಿಗೆ ಅನುಕೂಲವಾಗಿದೆ.</p>.<p>ವಿಜಯಪುರ ನಗರ, ಇಂಡಿ, ಸಿಂದಗಿ, ತಾಳಿಕೋಟೆ, ಮುದ್ದೇಬಿಹಾಳ, ದೇವರಹಿಪ್ಪರಗಿ, ನಾಲತವಾಡ, ಆಲಮೇಲ, ಕೊಲ್ಹಾರ, ತಾಂಬಾ, ಹೊರ್ತಿ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಬಿರುಸಿನ ಮಳೆಯಾಗಿದೆ. </p>.<p>ಚಂಡಮಾರುತದ ಪರಿಣಾಮ ಮೂರ್ನಾಲ್ಕು ದಿನಗಳಿಂದ ದಟ್ಟ ಮೋಡ ಕವಿದ ವಾತಾವರಣದೊಂದಿಗೆ ರಭಸದ ಗಾಳಿ ಬೀಸುತ್ತಿತ್ತು. ಆದರೆ, ಮಳೆಯಾಗಿರಲಿಲ್ಲ.</p>.<p>ಒಂದು ತಿಂಗಳಿಂದ ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸಿದ್ದರೂ ಜಿಲ್ಲೆಯಲ್ಲಿ ಉತ್ತಮ ಮಳೆ ಆಗಿರಲಿಲ್ಲ. ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗಿತ್ತು. ಈ ಮಳೆ ಕೃಷಿ ಚಟುವಟಿಕೆಗೆ ಅನುಕೂಲಕರವಾಗಿರಲಿಲ್ಲ. ಆದರೆ, ಗುರುವಾರ ಒಂದು ತಾಸಿಗೂ ಅಧಿಕ ಹೊತ್ತು ರಭಸದಿಂದ ಆದ ಮಳೆ ಕೃಷಿ ಚಟುವಟಿಕೆಗಳ ಪ್ರಾರಂಭಕ್ಕೆ ಮುನ್ನುಡಿ ಬರೆದಿದೆ.</p>.<p>ಕಳೆದ ಎರಡು–ಮೂರು ವರ್ಷಗಳಿಂದ ಬೇಸಿಗೆಯಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಈ ವರ್ಷದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಹದ ಮಳೆಯಾಗಿರಲಿಲ್ಲ. ಬಿಸಿಲ ಬೇಗೆಯಿಂದ ಜನ, ಜಾನುವಾರು, ಪ್ರಾಣಿ ಪಕ್ಷಿಗಳು ತತ್ತರಿಸಿದ್ದವು. ಇದೀಗ ಸುರಿದ ಭಾರೀ ಮಳೆಯಿಂದ ತಂಪಾದ ವಾತಾವರಣ ಸೃಷ್ಟಿಯಾಗಿದೆ.</p>.<p>ವಿಜಯಪುರ ನಗರದಲ್ಲಿ ಸುಮಾರು ಒಂದೂವರೆ ತಾಸು ಸುರಿದ ಮಳೆಯಿಂದ ಚರಂಡಿಗಳು ಉಕ್ಕಿ ರಸ್ತೆ ಮೇಲೆ ನೀರು ಹರಿಯಿತು. ಇದರಿಂದ ಜನ ಸಂಚಾರಕ್ಕೆ, ವ್ಯಾಪಾರ, ವಹಿವಾಟಿಗೆ ಅಡಚಣೆಯಾಯಿತು.</p>.<p>ಗಾಳಿ–ಮಳೆಗೆ ವಿದ್ಯುತ್ ಸಂಪರ್ಕ ಕೈಕೊಟ್ಟ ಪರಿಣಾಮ ಬಹಳ ಹೊತ್ತು ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>