<p>ಹೊಸಪೇಟೆ (ವಿಜಯನಗರ): ‘ತಾಂಡಾಗಳನ್ನು ಸರ್ಕಾರ ಕಂದಾಯ ಗ್ರಾಮಗಳಾಗಿ ಘೋಷಿಸಿದ್ದು, ಇನ್ಮುಂದೆ ಸರ್ಕಾರದ ಎಲ್ಲ ಸವಲತ್ತುಗಳು ಗ್ರಾಮದಲ್ಲೇ ಸಿಗಲಿವೆ’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.</p>.<p>ಕಂದಾಯ ಇಲಾಖೆಯು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ತಾಳೆ ಬಸಾಪುರ ತಾಂಡಾ ನಿವಾಸಿಗಳಿಗೆ ಸಾಂಕೇತಿಕವಾಗಿ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.</p>.<p>ಸರ್ಕಾರವು ವಿವಿಧ ಮಾನದಂಡಗಳನ್ನು ಆಧರಿಸಿ ಹೊಸದಾಗಿ ಕಂದಾಯ ಗ್ರಾಮಗಳನ್ನು ಘೋಷಿಸಿದೆ. ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ದೊರಕಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಮಜಿರೆ ಗ್ರಾಮ ಹಾಗೂ ತಾಂಡಾಗಳನ್ನು ಗುರುತಿಸಿ ಕಂದಾಯ ಗ್ರಾಮಗಳಾಗಿ ಘೋಷಿಸಿ ರಾಜ್ಯದಾದ್ಯಂತ ಏಕಕಾಲಕ್ಕೆ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರರಾದ ವಿಶ್ವಜೀತ್ ಮೆಹ್ತಾ, ಮೇಘ, ಕಂದಾಯ ಇಲಾಖೆಯ ಅಂದಾನಗೌಡ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ‘ತಾಂಡಾಗಳನ್ನು ಸರ್ಕಾರ ಕಂದಾಯ ಗ್ರಾಮಗಳಾಗಿ ಘೋಷಿಸಿದ್ದು, ಇನ್ಮುಂದೆ ಸರ್ಕಾರದ ಎಲ್ಲ ಸವಲತ್ತುಗಳು ಗ್ರಾಮದಲ್ಲೇ ಸಿಗಲಿವೆ’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.</p>.<p>ಕಂದಾಯ ಇಲಾಖೆಯು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ತಾಳೆ ಬಸಾಪುರ ತಾಂಡಾ ನಿವಾಸಿಗಳಿಗೆ ಸಾಂಕೇತಿಕವಾಗಿ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.</p>.<p>ಸರ್ಕಾರವು ವಿವಿಧ ಮಾನದಂಡಗಳನ್ನು ಆಧರಿಸಿ ಹೊಸದಾಗಿ ಕಂದಾಯ ಗ್ರಾಮಗಳನ್ನು ಘೋಷಿಸಿದೆ. ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ದೊರಕಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಮಜಿರೆ ಗ್ರಾಮ ಹಾಗೂ ತಾಂಡಾಗಳನ್ನು ಗುರುತಿಸಿ ಕಂದಾಯ ಗ್ರಾಮಗಳಾಗಿ ಘೋಷಿಸಿ ರಾಜ್ಯದಾದ್ಯಂತ ಏಕಕಾಲಕ್ಕೆ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರರಾದ ವಿಶ್ವಜೀತ್ ಮೆಹ್ತಾ, ಮೇಘ, ಕಂದಾಯ ಇಲಾಖೆಯ ಅಂದಾನಗೌಡ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>