ಕೇಂದ್ರ ಸರ್ಕಾರವು ರಸ್ತೆ, ಸಾರಿಗೆ, ರೈಲು, ಬ್ಯಾಂಕ್, ಜೀವ ವಿಮೆ, ವಿಮಾನ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಹಲವು ಸಾರ್ವಜನಿಕ ರಂಗದ ವಲಯಗಳನ್ನು ಖಾಸಗೀಕರಣ ಮಾಡುತ್ತಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕೋಟ್ಯಂತರ ನೌಕರರು, ಕಾರ್ಮಿಕರನ್ನು ಕಾರ್ಪೊರೇಟ್ ಸಂಸ್ಥೆಗಳ ಜೀತದಾಳು ಮಾಡಲು ಹೊರಟಿದೆ. ಇದು ಅಪಾಯಕಾರಿ ಬೆಳವಣಿಗೆ. ಇದರ ವಿರುದ್ಧ ಧ್ವನಿ ಎತ್ತತ್ತದಿದ್ದರೆ ದೇಶಕ್ಕೆ ದೊಡ್ಡ ಗಂಡಾಂತರವಿದೆ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.
ಕಾರ್ಮಿಕರಿಗೆ ಸಂಬಂಧಿಸಿದ 44 ಕಾಯ್ದೆಗಳನ್ನು ಬದಲಿಸಿ 4 ಸಂಹಿತೆಗಳನ್ನಾಗಿ ಮಾಡಲಾಗಿದೆ. ಕಾರ್ಮಿಕರ ಹಕ್ಕು ಕಸಿದುಕೊಳ್ಳುವ ಹುನ್ನಾರ ಇದರಲ್ಲಿ ಅಡಗಿದೆ. ಕಾರ್ಮಿಕರ ಸಂಘ ರಚನೆ, ಬೇಡಿಕೆಗಳ ಹೋರಾಟ, ಕನಿಷ್ಠ ವೇತನಕ್ಕೆ ಯಾರೂ ಹೋರಾಟ ಮಾಡಬಾರದ ರೀತಿಯಲ್ಲಿ ಸರ್ಕಾರ ನಿಯಮಗಳನ್ನು ಜಾರಿಗೆ ತರಲು ಹೊರಟಿದೆ. ಜನಸಾಮಾನ್ಯರು ಕಷ್ಟದಲ್ಲಿ ಬದುಕುತ್ತಿದ್ದಾರೆ. ಆದರೆ, ಅಂಬಾನಿ, ಅದಾನಿ ಆಸ್ತಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಎಲ್ಲ ವಿಚಾರಗಳ ಕುರಿತು ಮುಷ್ಕರದ ಸಂದರ್ಭದಲ್ಲಿ ಜನರಿಗೆ ತಿಳಿಸಲಾಗುವುದು ಎಂದರು.