ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ವಿರೂಪಾಕ್ಷೇಶ್ವರನಿಗೆ ಗುರುವಾರ ಚಿನ್ನದ ಕಿರೀಟ ತೊಡಿಸಿ, ವಿಶೇಷ ರೀತಿಯಲ್ಲಿ ಅಲಂಕರಿಸಿ ಪೂಜೆ ನೆರವೇರಿಸಲಾಗುತ್ತದೆ. ಇದನ್ನು ಕಣ್ತುಂಬಿಕೊಳ್ಳುವುದಕ್ಕಾಗಿ ಜಿಲ್ಲೆ ಸೇರಿದಂತೆ ನೆರೆಯ ಬಳ್ಳಾರಿ, ಕೊಪ್ಪಳ, ರಾಯಚೂರು, ಗದಗ, ದಾವಣಗೆರೆ ಜಿಲ್ಲೆಗಳಿಂದ ಭಕ್ತರು ಬರುತ್ತಾರೆ. ಅಲ್ಲಿಯೇ ಭಕ್ತರು ಲಿಂಗಪೂಜೆ ಮಾಡುತ್ತಾರೆ.