‘ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಅವರ ಸೂಚನೆಯ ಮೇರೆಗೆ ‘ಅಂಬಾರಿ’ ಸಂಚಾರಕ್ಕೆ ಸಂಬಂಧಿಸಿದಂತೆ ಸಾಧಕ ಬಾಧಕಗಳ ಅಧ್ಯಯನ ನಡೆಸಲಾಯಿತು. ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು, ತಂತಿಗಳು ಕೆಳಭಾಗದಲ್ಲಿರುವುದು ಗಮನಕ್ಕೆ ಬಂದಿದೆ. ಕೆಲವೆಡೆ ರೆಂಬೆ, ಕೊಂಬೆಗಳು ಸುಗಮ ಸಂಚಾರಕ್ಕೆ ತೊಡಕಾಗಿವೆ. ಇನ್ನು, ಕಮಲಾಪುರದ ಕಾಲುವೆ ಬಳಿ ವಿದ್ಯುತ್ ತಂತಿಗಳು ಬಹಳ ಕೆಳಭಾಗದಲ್ಲಿವೆ. ಇದರ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಲಾಗಿದ್ದು, ಅವರು ಮುಂದಿನ ಕ್ರಮ ಕೈಗೊಳ್ಳುವರು’ ಎಂದು ಸಮಿತಿಯ ಸದಸ್ಯರಲ್ಲಿ ಒಬ್ಬರಾದ ವಲಯ ಅರಣ್ಯ ಅಧಿಕಾರಿ ಕೆ.ಸಿ. ವಿನಯ್ಕುಮಾರ್ ‘ಪ್ರಜಾವಾಣಿ’ಗೆ ಮಾಹಿತಿ ಹಂಚಿಕೊಂಡರು.