<p><strong>ಹಗರಿಬೊಮ್ಮನಹಳ್ಳಿ</strong>: ನಿಜ ಶರಣ ಅಂಬಿಗರ ಚೌಡಯ್ಯನವರು ಜಗಜ್ಯೋತಿ ಬಸವಣ್ಣನವರ ಸಮಕಾಲೀನ ಶ್ರೇಷ್ಠ ವಚನಕಾರ ಎಂದು ಗಂಗಾಮತ ಸಮಾಜದ ಮುಖಂಡ ಬಾರಿಕರ ಬಾಪೂಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣಕ್ಕೆ ಆಗಮಿಸಿದ ನಿಜಶರಣ ಅಂಬಿಗರ ಚೌಡಯ್ಯನವರ ವಚನ ಜ್ಯೋತಿ ಸಂಚಾರಿ ಪೀಠ ಸ್ವಾಗತಿಸಿ ಅವರು ಮಾತನಾಡಿದರು.</p>.<p>‘ನೇರ, ನಿಷ್ಠುರವಾಗಿ ವಚನಗಳನ್ನು ಬರೆದ ಚೌಡಯ್ಯನವರು ಸಮಸಮಾಜ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ದೋಣಿ ನಡೆಸುವ ಅಂಬಿಗನಾಗಿ ಸೇವೆ ಮಾಡುತ್ತಲೇ ನೂರಾರು ವಚನಗಳನ್ನು ಬರೆಯುವ ಮೂಲಕ ವಚನ ಸಾಹಿತ್ಯಕ್ಕೆ ಪ್ರಮುಖ ಕೊಡುಗೆ ನೀಡಿದ್ದಾರೆ’ ಎಂದರು.</p>.<p>ನೌಕರರ ಸಂಘದ ಅಧ್ಯಕ್ಷ ಬಿ.ಮಾರುತೇಶ್ ಮಾತನಾಡಿ, ‘ವಚನ ಜ್ಯೋತಿ ಸಂಚಾರಿ ಪೀಠ ಕಲಬುರಗಿ ಜಿಲ್ಲೆಯ ಚಿತ್ತಾಪುರದಿಂದ ಆರಂಭಗೊಂಡು ರಾಜ್ಯದ ಎಲ್ಲ ತಾಲ್ಲೂಕುಗಳು ಮತ್ತು ಹೋಬಳಿ ಕೇಂದ್ರಗಳಿಗೆ ಸಂಚರಿಸಿ ಚೌಡಯ್ಯನವರ ಗ್ರಂಥಗಳನ್ನು ನಾಡಿನ ಉದ್ದಗಲಕ್ಕೂ ಪರಿಚಯಿಸುವ ಕೆಲಸ ಮಾಡುತ್ತಿದೆ’ ಎಂದರು.</p>.<p>ಗಂಗಾಮತ ಬೆಸ್ತ ಸಮಾಜದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸರ್ದಾರ ಯಮನೂರಪ್ಪ, ಬಾರಿಕರ ನಿಂಗಪ್ಪ, ಅಕಾರಿ ಪಂಪಣ್ಣ, ಸರ್ದಾರ್ ಸಿದ್ದಣ್ಣ, ಸರ್ದಾರ್ ವಸಂತಕುಮಾರ್, ಎಚ್.ಹುಲುಗಪ್ಪ, ಬಾರಿಕರ ಫೋಟೊ ಶೇಖರ್, ಅಂಬಿಗರ ಪುನೀತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ನಿಜ ಶರಣ ಅಂಬಿಗರ ಚೌಡಯ್ಯನವರು ಜಗಜ್ಯೋತಿ ಬಸವಣ್ಣನವರ ಸಮಕಾಲೀನ ಶ್ರೇಷ್ಠ ವಚನಕಾರ ಎಂದು ಗಂಗಾಮತ ಸಮಾಜದ ಮುಖಂಡ ಬಾರಿಕರ ಬಾಪೂಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣಕ್ಕೆ ಆಗಮಿಸಿದ ನಿಜಶರಣ ಅಂಬಿಗರ ಚೌಡಯ್ಯನವರ ವಚನ ಜ್ಯೋತಿ ಸಂಚಾರಿ ಪೀಠ ಸ್ವಾಗತಿಸಿ ಅವರು ಮಾತನಾಡಿದರು.</p>.<p>‘ನೇರ, ನಿಷ್ಠುರವಾಗಿ ವಚನಗಳನ್ನು ಬರೆದ ಚೌಡಯ್ಯನವರು ಸಮಸಮಾಜ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ದೋಣಿ ನಡೆಸುವ ಅಂಬಿಗನಾಗಿ ಸೇವೆ ಮಾಡುತ್ತಲೇ ನೂರಾರು ವಚನಗಳನ್ನು ಬರೆಯುವ ಮೂಲಕ ವಚನ ಸಾಹಿತ್ಯಕ್ಕೆ ಪ್ರಮುಖ ಕೊಡುಗೆ ನೀಡಿದ್ದಾರೆ’ ಎಂದರು.</p>.<p>ನೌಕರರ ಸಂಘದ ಅಧ್ಯಕ್ಷ ಬಿ.ಮಾರುತೇಶ್ ಮಾತನಾಡಿ, ‘ವಚನ ಜ್ಯೋತಿ ಸಂಚಾರಿ ಪೀಠ ಕಲಬುರಗಿ ಜಿಲ್ಲೆಯ ಚಿತ್ತಾಪುರದಿಂದ ಆರಂಭಗೊಂಡು ರಾಜ್ಯದ ಎಲ್ಲ ತಾಲ್ಲೂಕುಗಳು ಮತ್ತು ಹೋಬಳಿ ಕೇಂದ್ರಗಳಿಗೆ ಸಂಚರಿಸಿ ಚೌಡಯ್ಯನವರ ಗ್ರಂಥಗಳನ್ನು ನಾಡಿನ ಉದ್ದಗಲಕ್ಕೂ ಪರಿಚಯಿಸುವ ಕೆಲಸ ಮಾಡುತ್ತಿದೆ’ ಎಂದರು.</p>.<p>ಗಂಗಾಮತ ಬೆಸ್ತ ಸಮಾಜದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸರ್ದಾರ ಯಮನೂರಪ್ಪ, ಬಾರಿಕರ ನಿಂಗಪ್ಪ, ಅಕಾರಿ ಪಂಪಣ್ಣ, ಸರ್ದಾರ್ ಸಿದ್ದಣ್ಣ, ಸರ್ದಾರ್ ವಸಂತಕುಮಾರ್, ಎಚ್.ಹುಲುಗಪ್ಪ, ಬಾರಿಕರ ಫೋಟೊ ಶೇಖರ್, ಅಂಬಿಗರ ಪುನೀತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>