ಬುಧವಾರ ಇಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲರಿಗೂ ಅನ್ವಯಿಸುವ ರೀತಿಯಲ್ಲಿ ನಿಯಮಗಳನ್ನು ಮಾಡಲಾಗುತ್ತದೆ. ಗಣೇಶ ಚತುರ್ಥಿ ವರ್ಷಕ್ಕೊಮ್ಮೆ ಬರುತ್ತದೆ. ಆದರೆ, ದಿನಕ್ಕೆ ಐದು ಸಲ ನಮಾಜ್ ಮಾಡಲಾಗುತ್ತದೆ. ಆದರೆ, ಎಲ್ಲರೂ ಅವರ ಇತಿಮಿತಿಯಲ್ಲಿ ಮಾಡಬೇಕು. ಮಸೀದಿ, ದೇವಸ್ಥಾನ, ಚರ್ಚ್ಗಳ ಮೇಲೆ ಧ್ವನಿವರ್ಧಕ ಅಳವಡಿಸಲು ಶಬ್ದಮಾಲಿನ್ಯಕ್ಕೆ ಸಂಬಂಧಿಸಿದ ನಿಯಮಗಳನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಧಾರ ಮಾಡುತ್ತದೆ’ ಎಂದರು.