<p><strong>ಹೊಸಪೇಟೆ (ವಿಜಯನಗರ): </strong>ಸಚಿವ ಆನಂದ್ ಸಿಂಗ್ ಅವರು ಕುಟುಂಬ ಸದಸ್ಯರೊಂದಿಗೆ ಇಲ್ಲಿನ ವೇಣುಗೋಪಾಲ ದೇವಸ್ಥಾನದಲ್ಲಿ ನಡೆಯುತ್ತಿರುವ ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.</p>.<p>ಆನಂದ್ ಸಿಂಗ್ ಅವರ ಪೂರ್ವಜರಿಗೆ ಸೇರಿದ ಈದೇವಸ್ಥಾನದ ಜೀರ್ಣೊದ್ಧಾರ ಪೂರ್ಣಗೊಂಡಿದ್ದು, ಮೂರು ದಿನಗಳಿಂದ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಬುಧವಾರ ರಾಮ ಲಕ್ಷ್ಮಣ, ಸೀತೆ, ಕಾರ್ತಿಕ, ಗಣೇಶ, ವೆಂಕಟರಮಣ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ.</p>.<p>ಖಾತೆ ಬದಲಿಸಬೇಕೆಂದು ಬಿಗಿ ಪಟ್ಟು ಹಿಡಿದಿರುವ ಆನಂದ್ ಸಿಂಗ್, ಮೂರು ದಿನಗಳಿಂದ ರಾಜಕೀಯಚಟುವಟಿಕೆ , ಸಭೆ ಸಮಾರಂಭಗಳಿಂದ ದೂರ ಉಳಿದು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.</p>.<p>ಮಂಗಳವಾರ ರಾತ್ರಿ ಕಚೇರಿ ಬಂದ್ ಮಾಡಿ, ಅದರ ನಾಮಫಲಕ ತೆರವುಗೊಳಿಸಿದ್ದಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸುವುದನ್ನು ನಿಲ್ಲಿಸಿದ್ದಾರೆ. ಅವರ ಬೆಂಬಲಿಗರು, ಆಪ್ತರು ದೇವಸ್ಥಾನ ದಲ್ಲಿದ್ದಾರೆ. ಮಾಧ್ಯಮದವರು ದೇಗುಲದಲ್ಲಿ ಬೀಡು ಬಿಟ್ಟಿದ್ದು, ಅವರ ಮುಂದಿನ ನಡೆ ಬಗ್ಗೆ ತಿಳಿಸುವ ಸಾಧ್ಯತೆ ಇದೆ.</p>.<p><a href="https://www.prajavani.net/karnataka-news/cm-basavaraj-bommai-says-will-discuss-with-anand-sing-regarding-portfolio-distribution-raw-856753.html" itemprop="url">ಆನಂದ್ ಸಿಂಗ್ ಕರೆದು ಮಾತನಾಡುತ್ತೇನೆ, ಅಂತಿಮವಾಗಿ ಎಲ್ಲ ಸರಿಯಾಗಲಿದೆ: ಸಿಎಂ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಸಚಿವ ಆನಂದ್ ಸಿಂಗ್ ಅವರು ಕುಟುಂಬ ಸದಸ್ಯರೊಂದಿಗೆ ಇಲ್ಲಿನ ವೇಣುಗೋಪಾಲ ದೇವಸ್ಥಾನದಲ್ಲಿ ನಡೆಯುತ್ತಿರುವ ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.</p>.<p>ಆನಂದ್ ಸಿಂಗ್ ಅವರ ಪೂರ್ವಜರಿಗೆ ಸೇರಿದ ಈದೇವಸ್ಥಾನದ ಜೀರ್ಣೊದ್ಧಾರ ಪೂರ್ಣಗೊಂಡಿದ್ದು, ಮೂರು ದಿನಗಳಿಂದ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಬುಧವಾರ ರಾಮ ಲಕ್ಷ್ಮಣ, ಸೀತೆ, ಕಾರ್ತಿಕ, ಗಣೇಶ, ವೆಂಕಟರಮಣ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ.</p>.<p>ಖಾತೆ ಬದಲಿಸಬೇಕೆಂದು ಬಿಗಿ ಪಟ್ಟು ಹಿಡಿದಿರುವ ಆನಂದ್ ಸಿಂಗ್, ಮೂರು ದಿನಗಳಿಂದ ರಾಜಕೀಯಚಟುವಟಿಕೆ , ಸಭೆ ಸಮಾರಂಭಗಳಿಂದ ದೂರ ಉಳಿದು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.</p>.<p>ಮಂಗಳವಾರ ರಾತ್ರಿ ಕಚೇರಿ ಬಂದ್ ಮಾಡಿ, ಅದರ ನಾಮಫಲಕ ತೆರವುಗೊಳಿಸಿದ್ದಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸುವುದನ್ನು ನಿಲ್ಲಿಸಿದ್ದಾರೆ. ಅವರ ಬೆಂಬಲಿಗರು, ಆಪ್ತರು ದೇವಸ್ಥಾನ ದಲ್ಲಿದ್ದಾರೆ. ಮಾಧ್ಯಮದವರು ದೇಗುಲದಲ್ಲಿ ಬೀಡು ಬಿಟ್ಟಿದ್ದು, ಅವರ ಮುಂದಿನ ನಡೆ ಬಗ್ಗೆ ತಿಳಿಸುವ ಸಾಧ್ಯತೆ ಇದೆ.</p>.<p><a href="https://www.prajavani.net/karnataka-news/cm-basavaraj-bommai-says-will-discuss-with-anand-sing-regarding-portfolio-distribution-raw-856753.html" itemprop="url">ಆನಂದ್ ಸಿಂಗ್ ಕರೆದು ಮಾತನಾಡುತ್ತೇನೆ, ಅಂತಿಮವಾಗಿ ಎಲ್ಲ ಸರಿಯಾಗಲಿದೆ: ಸಿಎಂ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>