ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ‘ವೆಂಕಟರಮಣ ಗೋವಿಂದ’ ಎಂಬ ಭಕ್ತರ ಜಯಘೋಷ, ಹರ್ಷೋದ್ಗಾರದ ನಡುವೆ ರಥೋತ್ಸವ ಪ್ರಾರಂಭವಾಯಿತು. ರಥ ಮುಂದೆ ಸಾಗುತ್ತಿದ್ದಂತೆ ಭಕ್ತರು ಬಾಳೆಹಣ್ಣು, ಎಸೆದು ಭಕ್ತಿ ಸಮರ್ಪಿಸಿದರು. ಇದಕ್ಕೂ ಮುನ್ನ ನಡೆದ ನಿಶಾನೆ ಹರಾಜಿನಲ್ಲಿ ನಾಗರಹಳ್ಳಿ ಚಂದ್ರಶೇಖರ್ ₹1,86,101ಕ್ಕೆ ಪಟಾಕ್ಷಿ ಪಡೆದರು.