<p><strong>ಹೊಸಪೇಟೆ (ವಿಜಯನಗರ): </strong>ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗೆ ಸಂಬಂಧವಿಲ್ಲದ ಹೆಚ್ಚುವರಿ ಕೆಲಸ ನೀಡುತ್ತಿರುವುದನ್ನು ವಿರೋಧಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿ, ‘ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್’ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.</p>.<p>ಆಶಾ ಕಾರ್ಯಕರ್ತೆಯರಿಂದ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್, ಮತ ಚೀಟಿಗೆ ಆಧಾರ್ ಜೋಡಣೆ, ಈ– ಸಂಜೀವಿನಿಯಂಥ ಮೊಬೈಲ್ ಆಧಾರಿತ ಇತರೆ ಚಟುವಟಿಕೆಗಳನ್ನು ಒತ್ತಾಯಪೂರ್ವಕವಾಗಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಎ.ಐ.ಯು.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ನಿಗದಿಪಡಿಸಿದ ಕೆಲಸಗಳನ್ನು ಹೊರತುಪಡಿಸಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಳಸಿಕೊಳ್ಳಲಾಗುತ್ತಿದೆ. ತಾಯಿ-ಮಗುವಿನ ಆರೋಗ್ಯ ಕಾಪಾಡುವ ಪ್ರಮುಖ ಕೆಲಸವೇ ಹಿಂದಕ್ಕೆ ಸರಿಯುವ ಪರಿಸ್ಥಿತಿ ಎದುರಾಗಿದೆ ಎಂದರು.</p>.<p>ಆಶಾ ಸಂಘದ ಗೌರವ ಅಧ್ಯಕ್ಷೆ ಎ.ಶಾಂತಾ, ನೇತ್ರಾವತಿ, ಅನ್ನಪೂರ್ಣ, ಮಾರೆಕ್ಕ, ವಿಶಾಲಾಕ್ಷಿ, ಸುನಿತಾ, ಭುವನೇಶ್ವರಿ, ಶಿವಗಂಗಮ್ಮ, ಗೌರಿ, ಶೋಭಾ, ಹುಲಿಗೆಮ್ಮ, ಛಾಯಾ, ಶೋಭಾ, ಶ್ವೇತಾ, ಅನ್ನಪೂರ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗೆ ಸಂಬಂಧವಿಲ್ಲದ ಹೆಚ್ಚುವರಿ ಕೆಲಸ ನೀಡುತ್ತಿರುವುದನ್ನು ವಿರೋಧಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿ, ‘ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್’ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.</p>.<p>ಆಶಾ ಕಾರ್ಯಕರ್ತೆಯರಿಂದ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್, ಮತ ಚೀಟಿಗೆ ಆಧಾರ್ ಜೋಡಣೆ, ಈ– ಸಂಜೀವಿನಿಯಂಥ ಮೊಬೈಲ್ ಆಧಾರಿತ ಇತರೆ ಚಟುವಟಿಕೆಗಳನ್ನು ಒತ್ತಾಯಪೂರ್ವಕವಾಗಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಎ.ಐ.ಯು.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ನಿಗದಿಪಡಿಸಿದ ಕೆಲಸಗಳನ್ನು ಹೊರತುಪಡಿಸಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಳಸಿಕೊಳ್ಳಲಾಗುತ್ತಿದೆ. ತಾಯಿ-ಮಗುವಿನ ಆರೋಗ್ಯ ಕಾಪಾಡುವ ಪ್ರಮುಖ ಕೆಲಸವೇ ಹಿಂದಕ್ಕೆ ಸರಿಯುವ ಪರಿಸ್ಥಿತಿ ಎದುರಾಗಿದೆ ಎಂದರು.</p>.<p>ಆಶಾ ಸಂಘದ ಗೌರವ ಅಧ್ಯಕ್ಷೆ ಎ.ಶಾಂತಾ, ನೇತ್ರಾವತಿ, ಅನ್ನಪೂರ್ಣ, ಮಾರೆಕ್ಕ, ವಿಶಾಲಾಕ್ಷಿ, ಸುನಿತಾ, ಭುವನೇಶ್ವರಿ, ಶಿವಗಂಗಮ್ಮ, ಗೌರಿ, ಶೋಭಾ, ಹುಲಿಗೆಮ್ಮ, ಛಾಯಾ, ಶೋಭಾ, ಶ್ವೇತಾ, ಅನ್ನಪೂರ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>